Webdunia - Bharat's app for daily news and videos

Install App

ರೆಬಲ್ ಗಳಿಗೆ ಬಗ್ಗಲ್ಲ, ಕೊನೇ ಕ್ಷಣದಲ್ಲಿ ಬಂದವರಿಗೆ ಟಿಕೆಟ್ ಇಲ್ಲ: ಕುಮಾರಸ್ವಾಮಿ

Webdunia
ಮಂಗಳವಾರ, 7 ನವೆಂಬರ್ 2017 (10:35 IST)
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷದ ಪ್ರಚಾರದ ಪೂರ್ವಭಾವಿಯಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪೂಜೆ ಸಲ್ಲಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ರೆಬಲ್ ಗಳ ವಿರುದ್ಧ ಗುಡುಗಿದ್ದಾರೆ.

 
ರೆಬಲ್ ನಾಯಕರು ಜೆಡಿಎಸ್ ಹಿನ್ನಡೆಗೆ ಕಾರಣರಾಗಬಹುದೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ರೆಬಲ್ ನಾಯಕರಿಗೆ ಬಗ್ಗಲ್ಲ. ಆ ಕ್ಷೇತ್ರಗಳಲ್ಲಿ ಜನರೇ ನಮಗೆ ಬೆಂಬಲ ನೀಡಿ ಗೆಲ್ಲಿಸುತ್ತಾರೆ ಎಂದು ಕುಮಾರಸ್ವಾಮಿ ಖಡಕ್ ಆಗಿ ಹೇಳಿದ್ದಾರೆ.

ಅಷ್ಟೇ ಅಲ್ಲದೆ, ಕೊನೇ ಕ್ಷಣದಲ್ಲಿ ಪಕ್ಷಕ್ಕೆ ಬಂದವರಿಗೆಲ್ಲಾ ಟಿಕೆಟ್ ಸಿಗಲ್ಲ ಎಂದು ರೆಬಲ್ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜನರ ಆಶೀರ್ವಾದದೊಂದಿಗೆ ಅಧಿಕಾರಕ್ಕೆ ಮರಳುವುದೇ ನಮ್ಮ ಗುರಿ. ಅದಕ್ಕೆ ಈ ಚಾಮುಂಡೇಶ್ವರಿ ತಾಯಿಯ ಆಶೀರ್ವಾದದೊಂದಿಗೆ ನಮ್ಮ ಪ್ರಯತ್ನ ಆರಂಭಿಸಲಿದ್ದೇವೆ ಎಂದು ಕುಮಾರಸ್ವಾಮಿ ಈ ಸಂದರ್ಭದಲ್ಲಿ ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments