Select Your Language

Notifications

webdunia
webdunia
webdunia
webdunia

ಗೌರಿ ಹತ್ಯೆ ಆರ್ ಎಸ್ ಎಸ್ ಮಾಡಿದ್ದು ಎಂದ್ರೆ ಕೇಸ್!

ಗೌರಿ ಹತ್ಯೆ ಆರ್ ಎಸ್ ಎಸ್ ಮಾಡಿದ್ದು ಎಂದ್ರೆ ಕೇಸ್!
ಬೆಂಗಳೂರು , ಮಂಗಳವಾರ, 12 ಸೆಪ್ಟಂಬರ್ 2017 (08:49 IST)
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮಾಡಿದ್ದು ಸಂಘ ಪರಿವಾರದ ಸದಸ್ಯರು ಎಂದು ಕೆಲವು ವಿಚಾರವಾದಿಗಳು ಬಹಿರಂಗವಾಗಿ ಆರೋಪ ಮಾಡುತ್ತಿದ್ದಾರೆ. ಇನ್ನು ಮುಂದೆ ಹೀಗೆ ಮಾಡುವ ಮುನ್ನ ಹುಷಾರ್!

 
ಗೌರಿ ಹತ್ಯೆ ಮಾಡಿದ್ದು ಸಂಘ ಪರಿವಾರದವರು ಎಂದು ಸುಖಾ ಸುಮ್ಮನೇ ಸಾಮಾಜಿಕ ಜಾಲತಾಣಗಳಲ್ಲಿ, ಬಹಿರಂಗ ವೇದಿಕೆಗಳಲ್ಲಿ ಆರೋಪ ಮಾಡಿದರೆ ಕೇಸು ದಾಖಲಿಸುವುದಾಗಿ ರಾಜ್ಯ ಬಿಜೆಪಿ ಎಚ್ಚರಿಕೆ ನೀಡಿದೆ.

ಗೌರಿ ಲಂಕೇಶ್ ಹತ್ಯೆಯಾಗಿದ್ದಕ್ಕೆ ನಮಗೆ ಬೇಸರವಿದೆ. ಆದರೆ ಅದೇ ನೆಪ ಇಟ್ಟುಕೊಂಡು ಕೆಲವು ವಿಚಾರವಾದಿಗಳು ಆರ್ ಎಸ್ ಎಸ್ ಸಂಘಟನೆ ಮೇಲೆ ಗೂಬೆ ಕೂರಿಸಿದರೆ ಸುಮ್ಮನಿರಲ್ಲ ಎಂದು ಬಿಜೆಪಿ ಎಚ್ಚರಿಸಿದೆ. ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ.. ಭಾರತೀಯ ಆಟಗಾರರ ಪರ ಮತ್ತೆ ಒಲವು ತೋರಿದ ಶಾಹಿದ್ ಅಫ್ರಿದಿ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಯಡಿಯೂರಪ್ಪರಿಂದ ಇಂತಹ ಹೇಳಿಕೆ ನಿರೀಕ್ಷಿಸಿರಲಿಲ್ಲ: ಪರಮೇಶ್ವರ್