Webdunia - Bharat's app for daily news and videos

Install App

ಇದಕ್ಕೆಲ್ಲ ಹೆದರಿ ಓಡಿಹೋಗಲ್ಲ: ಸೂರಜ್ ರೇವಣ್ಣ ಮೂರು ದಿನದೊಳಗೆ ಉತ್ತರಿಸುವೆ ಎಂದಿದ್ದೇಕೆ

Sampriya
ಮಂಗಳವಾರ, 23 ಜುಲೈ 2024 (19:03 IST)
Photo Courtesy X
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿ, ಇಂದು ಷರತ್ತುಬದ್ಧ ಜಾಮೀನಿನಲ್ಲಿ ಹೊರಬಂದಿರುವ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಮೊದಲ ಬಾರಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಜೈಲಿನಿಂದ ಬಿಡುಗಡೆಯಾದ ಸೂರಜ್ ರೇವಣ್ಣ ಅವರನ್ನು ಬರಮಾಡಿಕೊಳ್ಳಲು ಜೆಡಿಎಸ್ ಕಾರ್ಯಕರ್ತರು ಮತ್ತು ಅವರ ಬೆಂಬಲಿಗರು ಕಾದು ನಿಂತಿದ್ದರು. ಈ ವೇಳೆ ಮಾಧ್ಯಮದ ಜತೆ ಮಾತನಾಡಿದ ಅವರು,  ನನ್ನ ಕುಟುಂಬದ ವಿರುದ್ಧ ಷಡ್ಯಂತ್ರ ಮಾಡಿ ತೇಜೋವಧೆ ಮಾಡಿದ್ದಾರೆ. ತೇಜೋವಧೆ ದೃಷ್ಟಿಯಿಂದ ನನ್ನ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಆದರೆ ಇದಕ್ಕೆಲ್ಲ ಹೆದರಿ ನಾವು ಓಡಿ ಹೋಗಲ್ಲ. ಈ ಪ್ರಕರಣ ಸಂಬಂಧ ಮೂರು ದಿನಗಳೊಳಗೆ ಸ್ಪಷ್ಟನೆ ನೀಡುತ್ತೇನೆ. ತನಿಖೆ ಸಂಬಂಧ ಅಧಿಕಾರಿಗಳಿಗೆ ಸಹಕಾರ ನೀಡಿದ್ದೇನೆ. ನನಗೆ ಕಾನೂನು ನ್ಯಾಯಾಂಗದ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದರು.

ಈ ರೀತಿ ನನ್ನ ತೇಜೋವಧೆ ಮಾಡುವ ಮೂಲಕ ನಮ್ಮ ಕುಟುಂಬ ಮತ್ತು ಹಾಸನ ಜಿಲ್ಲೆಯ ರಾಜಕಾರಣವನ್ನ ಕುಸಿತಗೊಳಿಸಬೇಕು ಅಂದುಕೊಂಡಿದ್ದಾರೆ. ಇದರ ಹಿಂದಿರುವ ಶಕ್ತಿಗಳ ಬಗ್ಗೆ ಶೀಘ್ರವೇ ಉತ್ತರ ನೀಡ್ತೇನೆ.  ಮೊದಲನೇ ದಿನದಿಂದಲೂ ತನಿಖೆಗೆ ಸಹಕರಿಸುತ್ತೇದ್ದೇನೆ. ನಾನು ಯಾವುದೇ ತಪ್ಪು ಮಾಡಿಲ್ಲ, ನಾನು ಓಡೋಗೋದಿಲ್ಲ ಎಂದರು.

ಹಾಸನದಲ್ಲಿ ನಮ್ಮ ಕುಟುಂಬದ ಮೇಲೆ ಒಂದು ಕಪ್ಪು ಚುಕ್ಕೆ ಇರ್ಲಿಲ್ಲ. ಇದು ಪ್ರಕರಣ ಅಲ್ಲ, ಇದೊಂದು ಷಡ್ಯಂತ್ರ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಹಾಸನದ ಬೆನ್ನಲ್ಲೇ ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ: ರಾಜ್ಯ ರಾಜಧಾನಿಯಲ್ಲಿ ಹೈಲರ್ಟ್‌

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

ಮುಂದಿನ ಸುದ್ದಿ