ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಬೆನ್ನಲ್ಲೇ ಕುಮಾರಸ್ವಾಮಿ ಗಣಿ ಹಗರಣ ಪ್ರಶ್ನಿಸಿದ ಕಾಂಗ್ರೆಸ್

Sampriya
ಶನಿವಾರ, 17 ಆಗಸ್ಟ್ 2024 (14:44 IST)
ಬೆಂಗಳೂರು: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಆಕ್ರೋಶ ಹೊರಹಾಕುತ್ತಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿಯವರ ಗಣಿ ಹಗರಣದ ತನಿಖೆಗೆ ಅನುಮತಿ ಕೋರಿ ಲೋಕಾಯುಕ್ತ ಮನವಿ ಸಲ್ಲಿಸಿದ ಕಡತವನ್ನು ತೆರೆದು ನೋಡಿಲ್ಲವೇ ಎಂದು ಕಾಂಗ್ರೆಸ್ ಪ್ರಶ್ನಿಸುತ್ತಿದೆ.

ಈ ಸಂಬಂಧ ಎಕ್ಸ್‌ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್, ಕೇಂದ್ರ ಸಚಿವ ಕುಮಾರಸ್ವಾಮಿಯವರ ಗಣಿ ಹಗರಣದ ತನಿಖೆಗೆ ಅನುಮತಿ ಕೋರಿ ಲೋಕಾಯುಕ್ತ ಮನವಿ ಸಲ್ಲಿಸಿದ ಕಡತವನ್ನು ತೆರೆದು ನೋಡಿಲ್ಲವೇ?

ಅವರ ವಿರುದ್ಧ ದೂರು ದಾಖಸಿದ್ದು ಯಾರೋ ಖಾಸಗಿ ವ್ಯಕ್ತಿಯಲ್ಲ, ಸ್ವಾಯುತ್ತ ಸಂಸ್ಥೆಯಾದ ಲೋಕಾಯುಕ್ತ ಎನ್ನುವುದು ನಿಮ್ಮ ಗಮನಕ್ಕಿದೆಯೇ?

ಕಳೆದ 10 ತಿಂಗಳಿಂದ ಈ ಕಡತವನ್ನು ತೆಗೆದು ನೋಡುವ ವ್ಯವದಾನ ನಿಮಗೆ ಇರಲಿಲ್ಲವೇ? ಅಥವಾ ತೆರೆದು ನೋಡಲು ಮೋ-ಶಾ ಅನುಮತಿ ಸಿಗಲಿಲ್ಲವೇ?

550 ಎಕರೆಯ ರಾಜ್ಯದ ಅದಿರು ಸಂಪತ್ತಿಗಿಂತ ಕೆಲವೇ ಕೆಲವು ಚದರ ಅಡಿಯ ನಿವೇಶನಗಳ ವಿಚಾರ ನಿಮಗೆ ಮುಖ್ಯವಾಗಿ ಕಂಡಿದ್ದು ಹೇಗೆ?

ಹಲವು ಬಿಜೆಪಿ ನಾಯಕರ ವಿರುದ್ಧದ ಕಡತಗಳು ನಿಮ್ಮ ಟೇಬಲ್ ಮೇಲೆ ಹಲವು ದಿನಗಳಿಂದ ಕೊಳೆಯುತ್ತಿದ್ದರೂ ಅವುಗಳ ಬಗ್ಗೆ ತಾವು ಗಮನ ಹರಿಸದಿರುವುದು ಏಕೆ?

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments