Webdunia - Bharat's app for daily news and videos

Install App

ಸಾಕ್ಷ್ಯವಿಲ್ಲದೆ ಸುಳ್ಳು ಆರೋಪ ಮಾಡುವುದರಲ್ಲಿ ಹುರುಳಿಲ್ಲ: ಯು.ಟಿ.ಖಾದರ್

Webdunia
ಸೋಮವಾರ, 18 ಸೆಪ್ಟಂಬರ್ 2017 (18:37 IST)
ಮಂಗಳೂರು: ಪ್ರತಿಪಕ್ಷದವರಿಗೆ ಸರ್ಕಾರ, ಮುಖ್ಯಮಂತ್ರಿಗಳ ಮೇಲೆ ಆರೋಪ ಮಾಡಲು ಯಾವುದೇ ಕಾರಣವಿಲ್ಲ. ಆದರೂ ಬಿಜೆಪಿಯವರು ಇಲ್ಲ ಸಲ್ಲದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಐದು ವರ್ಷದ ಆಡಳಿತದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡಿ ಸರ್ವರ ಪ್ರೀತಿಗೆ ಪಾತ್ರವಾಗಿದೆ. ಹೀಗಾಗಿ ಈ ಅಪಪ್ರಚಾರಕ್ಕೆ ಜನರು ಮಾನ್ಯತೆ ನೀಡುವುದಿಲ್ಲ. ಪ್ರತಿ ವಿಚಾರಕ್ಕೆ ಕೆ.ಜೆ. ಜಾರ್ಜ್ ರಾಜೀನಾಮೆ ಕೇಳಿ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸಲು ಬಿಜೆಪಿ ಯತ್ನಿಸುತ್ತಿದೆ. ಸುಪ್ರೀಂಕೋರ್ಟ್ ಕೆ.ಜೆ.ಜಾರ್ಜ್ ಆರೋಪಿಯೆಂದು ಎಲ್ಲಿಯೂ ಹೇಳಿಲ್ಲ. ಪ್ರಕರಣದ ತನಿಖೆ ಮಾಡಿ 3 ತಿಂಗಳೊಳಗೆ ವರದಿ ಸಲ್ಲಿಸಲು ಸಿಬಿಐಗೆ ತಿಳಿಸಿದೆ. ಆದರೆ ಜಾರ್ಜ್ ಹೆಸರು ಸುಪ್ರೀಂಕೋರ್ಟ್ ಎಲ್ಲಿಯೂ ಸೂಚಿಸಿಲ್ಲ ಎಂದು ಹೇಳಿದ್ದಾರೆ.

ಚುನಾವಣೆ ಸಮೀಪಿಸುತ್ತಿದ್ದಂತೆ ತಪ್ಪು ಅಭಿಪ್ರಾಯ ತರುವ ಯತ್ನ ಮಾಡುತ್ತಿದ್ದು, ಜನರ ಮಧ್ಯೆ ಗೊಂದಲ ಸೃಷ್ಠಿಸುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ರೀತಿಯ ಭಿನ್ನಾಭಿಪ್ರಾಯ ಬಂದಲ್ಲಿ‌ ಜನರು ಒಂದೇ ಅಭಿಪ್ರಾಯಕ್ಕೆ ಬರಬಾರದು. ಜನ ಸಾಮಾನ್ಯರು, ಹಿರಿಯರು ತಾಳ್ಮೆಯಿಂದಿರಬೇಕು. ಜನರು ನೈಜ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಕೈಜೋಡಿಸಬೇಕು. ಸರ್ಕಾರದ ತಪ್ಪಿದ್ದಲ್ಲಿ ಪ್ರತಿ ಪಕ್ಷ ಆಧಾರ ಸಮೇತ ಮುಂದಿಡಬೇಕು. ಅದನ್ನು ಬಿಟ್ಟು ಸುಮ್ಮನೆ ಬಾಯಿ ಮಾತಲ್ಲಿ ಹೇಳುವುದಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮೈಸೂರಿಗೆ ಆಗಮಿಸುವ ಮೋದಿಗೆ ನೀಡಲು ಶಿಲ್ಪಿ ಅರುಣ್ ಯೋಗಿರಾಜ್‌ ಕೆತ್ತನೆಯಲ್ಲಿ ವಿವೇಕಾನಂದರ ಮೂರ್ತಿ

ಕಾವೇರಿ ನೀರು ಹಂಚಿಕೆ ವಿಚಾರ: ಮಹತ್ವದ ಸಭೆ ಕರೆದ ಸಿಎಂ ಡಿಕೆ ಶಿವಕುಮಾರ್

ಅಮಿತ್ ಶಾರನ್ನು ಹೊರಗೆ ಜನರ ಮುಂದೆ ಎಳೆದು ತಂದು ನಿಲ್ಲಿಸ್ತೀವಿ: ಮಲ್ಲಿಕಾರ್ಜುನ ಖರ್ಗೆ ವಿವಾದ Video

ಕಾವೇರಿ ನೀರು ವಿವಾದ: CWRC ಆದೇಶ ಎತ್ತಿಹಿಡಿದ ಪ್ರಾಧಿಕಾರ; ಕರ್ನಾಟಕಕ್ಕೆ ಹಿನ್ನಡೆ

ಮುಂದಿನ ಸುದ್ದಿ
Show comments