Publish Date: Tue, 27 Dec 2022 (12:37 IST)
Updated Date: Tue, 27 Dec 2022 (11:39 IST)
ಬೆಳಗಾವಿ : ಕೊರೊನಾ ಪಾಸಿಟಿವ್ ಬಂದ ತಕ್ಷಣ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ನಾವು ಚೀನಾಗೆ ಹೋಲಿಕೆ ಮಾಡೋದು ಬೇಡ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದರು.
ಈ ಬಗ್ಗೆ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಚೀನಾ ಮುನ್ನೆಚ್ಚರಿಕೆ ಕ್ರಮ ಹಾಗೂ ಲಸಿಕೆ ಬಗ್ಗೆ ಸರಿಯಾದ ಮಾಹಿತಿ ಇಲ್ಲ.
ನಮ್ಮ ರಾಜ್ಯದಲ್ಲಿ ಯಾರು ಆತಂಕ ಪಡುವ ಅಗತ್ಯವಿಲ್ಲ ಮುಂಜಾಗ್ರತಾ ಕ್ರಮ ತಗೆದುಕೊಂಡರೆ ಸಾಕು. ನಮ್ಮ ಲಸಿಕೆ ಚೆನ್ನಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎಂದರು.
ನಮ್ಮ ದೇಶದಲ್ಲಿ ಎರಡು ಪಟ್ಟು ನಾವು ಚೆನ್ನಾಗಿದ್ದೇವೆ. ಸ್ವಾಭಾವಿಕವಾಗಿ ನಮ್ಮಲ್ಲಿ ರೋಗನಿರೋಧಕ ಶಕ್ತಿ ಜಾಸ್ತಿ ಇದೆ. ಯಾವ ರೀತಿ ಮಾರ್ಗಸೂಚಿ ಕೊಡಬೇಕು ಮತ್ತು ಆಸ್ಪತ್ರೆಯ ವ್ಯವಸ್ಥೆ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.