ಕೋವಿಡ್‌ಶೀಲ್ಡ್ ಪಡೆದವರು ಫ್ರಿಡ್ಜ್ ನೀರು, ಐಸ್‌ ಕ್ರೀ ಸೇವಿಸಬೇಡಿ ಎಂದು ತಪ್ಪು ಮಾಹಿತಿ ಕೊಟ್ಟ ಕಾಲೇಜುಗಳಿಗೆ ನೋಟಿಸ್

Sampriya
ಶುಕ್ರವಾರ, 3 ಮೇ 2024 (17:35 IST)
Photo Courtesy X
ಚಿಕ್ಕಬಳ್ಳಾಪುರ: ಕೋವಿಡ್ ನಿಯಂತ್ರಣಕ್ಕಾಗಿ ಕೋವಿಶೀಲ್ಡ್ ಲಸಿಕೆ ಪಡೆದವರಲ್ಲಿ ದಿಢೀರ್ ಹೃದಯಾಘಾತವಾಗಿ ಹಲವು ಅಡ್ಡಪರಿಣಾಮಗಳು ಉಂಟಾಗಲಿದ್ದು, ಆದ್ದರಿಂದ ಫ್ರಿಡ್ಜ್ ನೀರು, ಆಹಾರ ಸೇವನೆ ಮಾಡಬೇಡಿ ಎಂದು ಸುದ್ದಿ ಹಬ್ಬಿಸಿದ ನಗರದ ಸಿದ್ದರಾಮಯ್ಯ ಲಾ ಕಾಲೇಜು ಹಾಗೂ ಜಚನಿ ಪ್ರಥಮ ದರ್ಜೆ ಕಾಲೇಜುಗಳಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳಿಂದ ನೋಟಿಸ್ ನೀಡಿದೆ.

ಕೋವಿಡ್‌ಶೀಲ್ಡ್ ಲಸಿಕೆ ಪಡೆದವರಲ್ಲಿ ದಿಢೀರ್‌ ಹೃದಯಾಘಾತ, ರಕ್ತ ಹೆಪ್ಪುಗಟ್ಟುವುದು ಸೇರಿ ಹಲವು ರೀತಿಯ ಅಡ್ಡಪರಿಣಾಮಗಳು ಉಂಟಾಗಲಿದ್ದು, ಈ ಹಿನ್ನೆಲೆ ಲಸಿಕೆ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ ಹಾಗೂ ತಂಪು ಪಾನೀಯ ಸೇವನೆ ಮಾಡದಂತೆ ಹಲವು ಕಾಲೇಜು ಆಡಳಿತ ಮಂಡಳಿಗಳು ಸೂಚನಾ ಪತ್ರದ ಮೂಲಕ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿತ್ತು.

ಸಾಮಾಜಿಕ ಜಾಲತಾಣದಲ್ಲಿ ಈ ಮಾಹಿತಿ ಭಾರೀ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ತಪ್ಪು ಮಾಹಿತಿ ನೀಡಿದ ನಗರದ ವಿವಿಧ ಕಾಲೇಜುಗಳ ವಿರುದ್ಧ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಿದೆ. ಜಿಲ್ಲಾಧಿಕಾರಿ ನೇತೃತ್ವದ ಡಿಜಾಸ್ಟರ್ ಮ್ಯಾನೇಜ್ಮೆಂಟ್ ಕಮಿಟಿ ಮುಂದಾಗಿದೆ. ಸೂಚನಾ ಪತ್ರಗಳ ಬಗ್ಗೆ ಸೂಕ್ತ ಸ್ಪಷ್ಟನೆ ನೀಡುವಂತೆ ನೋಟಿಸ್‌ ನೀಡಲಾಗಿದೆ.

ಕಾಲೇಜು ಆಡಳಿತ ಮಂಡಳಿಗಳ ಸೂಚನಾ ಪತ್ರ ವೈರಲ್ ಆಗಿದ್ದರಿಂದ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಿದ್ದು ಈ ಸಂಬಂಧ ಪ್ರತಿಕ್ರಿಯಿಸಿದ ಆರೋಗ್ಯ ಇಲಾಖೆ  ಯಾವುದೇ ಸುತ್ತೋಲೆಯನ್ನು ಹೊರಡಿಸಿಲ್ಲ ಎಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಬೈಟ್ ತಗೊಳ್ಳಿ ಎಂದು ಪತ್ರಕರ್ತರಿಗೆ ಪ್ರತಾಪ್ ಸಿಂಹ ಅಂಗಲಾಚ್ತಿದ್ದಾರೆ: ಪ್ರಿಯಾಂಕ್ ಖರ್ಗೆ

Karnataka Weather: ವಾರಂತ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಿವರ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ಮುಂದಿನ ಸುದ್ದಿ
Show comments