Select Your Language

Notifications

webdunia
webdunia
webdunia
webdunia

ಪಕ್ಷಕ್ಕೆ ಮುಜುಗರ ತರೋ ಕೆಲಸ ಯಾರು ಮಾಡಬೇಡಿ.- ಬೆಂಬಲಿಗರಲ್ಲಿ ಶ್ರೀರಾಮುಲು ಮನವಿ

ಪಕ್ಷಕ್ಕೆ ಮುಜುಗರ ತರೋ ಕೆಲಸ ಯಾರು ಮಾಡಬೇಡಿ.- ಬೆಂಬಲಿಗರಲ್ಲಿ ಶ್ರೀರಾಮುಲು ಮನವಿ
ಬಳ್ಳಾರಿ , ಬುಧವಾರ, 28 ಆಗಸ್ಟ್ 2019 (13:09 IST)
ಬಳ್ಳಾರಿ : ಖಾತೆ ಹಾಗೂ ಡಿಸಿಎಂ ಹುದ್ದೆ ವಿಚಾರವಾಗಿ ಅಮಾಧಾನಗೊಂಡು ಪ್ರತಿಭಟನೆ ಕೈಗೊಂಡ  ಬೆಂಬಲಿಗರಿಗೆ ಶ್ರೀರಾಮುಲು ಕರೆಯೊಂದನ್ನು ನೀಡಿದ್ದಾರೆ.



ಈ ಬಗ್ಗೆ ಮಾತನಾಡಿದ ಅವರು, ಪಕ್ಷ ತಾಯಿ ಇದ್ದಂತೆ, ಪಕ್ಷದ ತೀರ್ಮಾನ ತೆಗೆದುಕೊಂಡಿದ್ದಕ್ಕೆ ನಾನು ಬದ್ಧ. ವೈಯಕ್ತಿಕ ಅಭಿಪ್ರಾಯ ಬದಿಗೊತ್ತಿ ಕೆಲಸ ಮಾಡಿ. ಯಾವುದೇ ಪ್ರತಿಭಟನೆ ಮಾಡಬೇಡಿ. ಪಕ್ಷಕ್ಕೆ ಮುಜುಗರ ತರೋ ಕೆಲಸ ಯಾರು ಮಾಡಬೇಡಿ. ಪಕ್ಷಕ್ಕಾಗಿ ಎಲ್ಲರೂ ಸೇರಿ ದುಡಿಯೋಣ ಎಂದು ತಮ್ಮ ಬೆಂಬಲಿಗರಲ್ಲಿ ಮನವಿ ಮಾಡಿದ್ದಾರೆ.


 

ಎಲ್ಲಾ ಜನರಿಗೆ ನ್ಯಾಯಕೊಡಿಸೋ ಕೆಲಸ ಬಿಜೆಪಿ ಪಕ್ಷ ಸೇರಿದಂತೆ ನಾನು ಮಾಡುತ್ತೇನೆ. ವಾಲ್ಮೀಕಿ ಸಮುದಾಯಕ್ಕೆ 7.5 ಮೀಸಲಾತಿ ನೀಡುವ ಕೆಲಸವಾಗಬೇಕಿದೆ. ಸಿಎಂ ಯಡಿಯೂರಪ್ಪ ಈ ಬಗ್ಗೆ ಅಶ್ವಾಸನೆ ನೀಡಿದ್ದಾರೆ. ಅದು ಸಿಕ್ಕರೆ ವಾಲ್ಮೀಕಿ ಸಮುದಾಯದಕ್ಕೆ ಎಲ್ಲಾ ಸಿಕ್ಕಂತೆ. ಈ ವಿಚಾರದಲ್ಲಿ ರಮೇಶ್ ಜಾರಕಿಹೊಳಿ, ಬಾಲಚಂದ್ರ, ಶಿವನಗೌಡ ಮತ್ತು ರಾಜುಗೌಡ ಎಲ್ಲಾರು ಒಂದಾಗಿದ್ದೇವೆ ಎಂದು ಅವರು ತಿಳಿಸಿದ್ದಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಅಸಮಾಧಾನಗೊಂಡ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಯಡಿಯೂರಪ್ಪ