Publish Date: Sat, 26 Feb 2022 (14:56 IST)
Updated Date: Sun, 27 Feb 2022 (00:58 IST)
ಚಿಕ್ಕಬಳ್ಳಾಪುರ : ಉಕ್ರೇನ್ನಲ್ಲಿರೋ ಕನ್ನಡಿಗರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ.
ಈಗಾಗಲೇ ನಾನು ಹಾಗೂ ಸಿಎಂ ಕೇಂದ್ರ ವಿದೇಶಾಂಗ ಇಲಾಖೆ ಹಾಗೂ ಉಕ್ರೇನ್ನ ಭಾರತದ ರಾಯಭಾರಿ ಕಚೇರಿ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ ಅಂತ ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅವರು, ವಿದ್ಯಾರ್ಥಿಗಳು ಯಾರೂ ಕೂಡ ನೀವಾಗೇ ನೀವೆ ತೀರ್ಮಾನ ಮಾಡಿಕೊಂಡು ರುಮೇನಿಯಾ, ಪೊಲೆಂಡ್ ಸೇರಿದಂತೆ ಇತರೆ ಬಾರ್ಡರ್ ಏರಿಯಾಗಳಿಗೆ ಹೋಗುವ ಪ್ರಯತ್ನ ಮಾಡಬೇಡಿ. ನಮ್ಮ ಭಾರತ ಸರ್ಕಾರ ವಿವಿಧ ಹಂತಗಳಲ್ಲಿ ಇತರೆ ದೇಶಗಳ ಜೊತೆ ಮಾತುಕತೆ ಮಾಡುತ್ತಿದ್ದಾರೆ ಎಂದಿದ್ದಾರೆ.
ನೀವು ಎಲ್ಲಿದ್ದೀರೋ ಅಲ್ಲೇ ಸುರಕ್ಷಿತವಾಗಿ ಇರಿ. ಕೆಲವೇ ದಿನಗಳಲ್ಲಿ ಕದನ ವಿರಾಮ ಆಗುವ ಅಪೇಕ್ಷೆ ನಮ್ಮದು.ಕದನ ವಿರಾಮದ ನಂತರೆ ಭಾರತಕ್ಕೆ ಬರುವವರನ್ನು ಕರೆತರಲು ಸರ್ಕಾರ ಬದ್ಧವಾಗಿದೆ.