Select Your Language

Notifications

webdunia
webdunia
webdunia
webdunia

ಭಾರತವನ್ನ ಹಿಂದೂ ರಾಷ್ಟ್ರವನ್ನಾಗಿಸಲು ಬಿಡುವುದಿಲ್ಲ- ಸಿದ್ದರಾಮಯ್ಯ

ಭಾರತವನ್ನ ಹಿಂದೂ ರಾಷ್ಟ್ರವನ್ನಾಗಿಸಲು ಬಿಡುವುದಿಲ್ಲ- ಸಿದ್ದರಾಮಯ್ಯ
ಬೆಂಗಳೂರು , ಶುಕ್ರವಾರ, 17 ಜನವರಿ 2020 (07:06 IST)
ಬೆಂಗಳೂರು : ಭಾರತ ಒಂದು ಜಾತ್ಯಾತೀತ ರಾಷ್ಟ್ರವಾಗಿದೆ. ಅದನ್ನು ಯಾವುದೇ ಕಾರಣಕ್ಕೂ ಹಿಂದೂ ರಾಷ್ಟ್ರವನ್ನಾಗಿಸಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.



ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಿಎಎ ಮತ್ತು ಎನ್ ಆರ್ ಸಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಪೌರತ್ವ ಕಾಯ್ದೆ, ಎನ್.ಪಿ.ಆರ್, ಎನ್.ಆರ್.ಸಿ ಎಲ್ಲವೂ ಒಂದೇ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಮೋದಿ ಈ ಬಗ್ಗೆ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.


ಎನ್ ಪಿಆರ್  ಸಂವಿಧಾನ ವಿರೋಧಿ ಕಾಯ್ದೆ. ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ನಮ್ಮ ವಿರೋಧವಿಲ್ಲ. ಆದರೆ ಮುಸ್ಲಿಂರನ್ನು ಹೊರಗಟ್ಟಿರುವುದು ಯಾಕೆ ? ಅವರು ನಮ್ಮ ದೇಶಕ್ಕೆ ಬಂದಿದ್ದಾರೆ ಅವರನ್ನು ಏಕೆ ಕಾಯ್ದೆಯಿಂದ ಹೊರಗಿಡಲಾಗಿದೆ ಎಂದು ಪ್ರಶ್ನಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಂಧ್ರಪ್ರದೇಶದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಪವನ್ ಕಲ್ಯಾಣ್