Webdunia - Bharat's app for daily news and videos

Install App

ಗ್ಯಾರಂಟಿಗಾಗಿ ರೈತರ ಬದುಕು ಬಲಿ ಕೊಡಬೇಡಿ-ಮಾಜಿ ಸಚಿವ ಎಚ್.ಡಿ.ರೇವಣ್ಣ

Webdunia
ಗುರುವಾರ, 14 ಸೆಪ್ಟಂಬರ್ 2023 (15:01 IST)
ಸರ್ಕಾರದ ವಿರುದ್ಧ ಮಾಜಿ ಸಚಿವ ಎಚ್.ಡಿ.ರೇವಣ್ಣ ಕಿಡಿಕಾರಿದ್ದಾರೆ. ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರವನ್ನು ಬರಗಾಲ ಪೀಡಿತ ಎಂದು ಘೋಷಣೆ ಮಾಡಿ ನಷ್ಟವಾಗಿರುವ ಬೆಳೆಗೆ ಸೂಕ್ತ ಪರಿಹಾರ ಘೋಷಣೆ ಮಾಡಬೇಕು. ಆದರೆ ಈ ಕಾಂಗ್ರೆಸ್‌ ಸರ್ಕಾರ ರೈತರ ಮನೆ ಹಾಳಾದ್ರು ಪರವಾಗಿಲ್ಲ, ಬೇಕಾದರೇ ಬೀದಿಪಾಲಾಗಲಿ ನಮಗೆ ಗ್ಯಾರಂಟಿ ಯೋಜನೆ ಈಡೇರಿಸುವುದೇ ಮುಖ್ಯ ಎನ್ನುವಂತೆ ವರ್ತಿಸುತ್ತಿದೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಟೀಕಿಸಿದರು. ಹಾಸನದಲ್ಲಿ ಮಾತನಾಡಿದ ಅವರು, ಜಿಲ್ಲೆಯ ರೈತರು ಕಷ್ಟದಲ್ಲಿದ್ದು, ನಿಮ್ಮ ಗ್ಯಾರಂಟಿ ಯೋಜನೆಗಾಗಿ ರೈತರ ಬದುಕು ಬಲಿ ಕೊಡಬೇಡಿ. ಸಂಕಷ್ಟಕ್ಕೆ ಸಿಲುಕಿರೊ ರೈತರ ನೆರವಿಗೆ ಸರ್ಕಾರ ಬರಬೇಕು. 1 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಜೋಳ ಬೆಳೆಯಲಾಗಿದೆ. 75 ಸಾವಿರ ಹೆಕ್ಟೇರ್ ಜಾಗದಲ್ಲಿ ರಾಗಿ ಬೆಳೆಯಲಾಗಿದೆ. ಒಟ್ಟು ಸುಮಾರು 2 ಲಕ್ಷ 30 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಬೆಳೆ ಬಹುತೇಕ ನಾಶವಾಗಿದೆ. ಇದುವರೆಗೂ ಸರಕಾರವು ಗಮನ ನೀಡಿ ಪರಿಹಾರ ನೀಡಿರುವುದಿಲ್ಲ. ರೈತರು ಹಾಳು ಬಿದ್ದು ಹೋಗಲಿ ಎನ್ನುವ ಪರಿಸ್ಥಿತಿಗೆ ಬಂದಿದೆ. ಕೇವಲ ಗ್ಯಾರಂಟಿ ಕಡೆ ಗಮನ ಕೊಡಲಾಗಿದ್ದು, ನಾವೇನಾದ್ರೂ ಮಾತನಾಡಿದ್ರೆ ಜೆಡಿಎಸ್ ಮುಗಿದು ಹೋಗುತ್ತೆ. ಅದಕ್ಕೆ ಅವರಿವರ ಬಳಿ ಹೋಗುತ್ತಿರುವುದಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದರು.. ಮೊದಲು ರೈತರನ್ನು ಉಳಿಸಿ ಅವರ ಬೆಳೆಗೆ ಪರಿಹಾರ ಕೊಡಬೇಕೆಂದು ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments