Webdunia - Bharat's app for daily news and videos

Install App

ಮಾಧ್ಯಮಗಳೆದುರು ಮಕ್ಕಳಂತೆ ಕಿತ್ತಾಡಿ ನಗೆಪಾಟಲಿಗೀಡಾದ ಝೆಲೆನ್ ಸ್ಕಿ, ಡೊನಾಲ್ಡ್ ಟ್ರಂಪ್ ವಿಡಿಯೋ

Krishnaveni K
ಶನಿವಾರ, 1 ಮಾರ್ಚ್ 2025 (09:37 IST)
Photo Credit: X
ನ್ಯೂಯಾರ್ಕ್: ಎರಡು ದೇಶಗಳ ನಾಯಕರು ಜೊತೆಗೇ ಪತ್ರಿಕಾಗೋಷ್ಠಿ ನಡೆಸುವಾಗ ಹೇಗಿರಬಾರದು ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಮಾಧ್ಯಮಗಳ ಎದುರೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉಕ್ರೇನ್ ಅಧ್ಯಕ್ಷ ಝೆಲೆನ್ ಸ್ಕಿ ಮಕ್ಕಳಂತೆ ಕಿತ್ತಾಡಿದ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಮೆರಿಕಾಕ್ಕೆ ಭೇಟಿ ನೀಡಿದ ಉಕ್ರೇನ್ ಅಧ್ಯಕ್ಷ ಝೆಲೆನ್ ಸ್ಕಿ ಜೊತೆ ಟ್ರಂಪ್ ಶ್ವೇತಭವನದಲ್ಲಿ ಮಾಧ್ಯಮಗೋಷ್ಠಿ ನಡೆಸಿದ್ದಾರೆ. ರಷ್ಯಾ-ಉಕ್ರೇನ್ ನಡುವಿನ ಯುದ್ಧ ಮತ್ತು ಅದಕ್ಕೆ ಅಮೆರಿಕಾ ನೀಡಿದ ಸಹಾಯದ ಕುರಿತು ಎರಡೂ ರಾಷ್ಟ್ರಗಳ ನಾಯಕರು ಚರ್ಚೆ ನಡೆಸಿದ್ದಾರೆ.

ನಾವು ರಷ್ಯಾದೊಂದಿಗೆ ಯಾವುದೇ ಕದನ ವಿರಾಮ ಒಪ್ಪಂದ ಉಲ್ಲಂಘನೆ ನಾವು ಒಪ್ಪಿಕೊಳ್ಳಲ್ಲ. ಈ ಹಿಂದೆ 25 ಬಾರಿ ಕದನ ವಿರಾಮ ಒಪ್ಪಂದ ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ರಷ್ಯಾದೊಂದಿಗೆ ಅಮೆರಿಕಾ ಯಾವುದೇ ಒಪ್ಪಂದ ಮಾಡಿಕೊಳ್ಳಬಾರದು ಎಂದು ಝೆಲೆನ್ ಸ್ಕಿ ಹೇಳಿದರು.

ಇದಕ್ಕೆ ಟ್ರಂಪ್ ನೀವು ಲಕ್ಷಾಂತರ ಜನರ ಜೀವಗಳ ಜೊತೆ ಆಟವಾಡುತ್ತಿದ್ದೀರಿ. ಇದು ನಿಮಗೆ ಗೊತ್ತಾಗುತ್ತಿಲ್ಲ. ಕೊನೆಯದಾಗಿ ನೀವು ರಷ್ಯಾದೊಂದಿಗೆ ರಾಜಿ ಮಾಡಿಕೊಳ್ಳಲೇಬೇಕಾಗುತ್ತದೆ ಎಂದಿದ್ದಾರೆ. ಈ ವಿಚಾರವಾಗಿ ಇಬ್ಬರೂ ನಾಯಕರು ಮಾಧ್ಯಮಗಳ ಮುಂದೆ ಕಿತ್ತಾಡಿದ್ದಾರೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಎರಡು ದೊಡ್ಡ ರಾಷ್ಟ್ರಗಳ ನಾಯಕರಾಗಿದ್ದುಕೊಂಡು ಬಹಿರಂಗವಾಗಿ ಹೇಗೆ ನಡೆದುಕೊಳ್ಳಬೇಕು ಎಂಬುದೂ ಇವರಿಗೆ ಗೊತ್ತಿಲ್ಲವೇ ಎಂದು ಹಲವರು ಕಿಡಿ ಕಾರಿದ್ದಾರೆ. ಇನ್ನೂ ಮುಂದುವರಿದು ಕೆಲವರು ಈ ವಿಡಿಯೋವನ್ನೇ ಎಐ ತಂತ್ರಜ್ಞಾನದ ಮೂಲಕ ಇಬ್ಬರೂ ಕೈ ಕೈ ಮಿಲಾಯಿಸುವಂತೆ ಎಡಿಟ್ ಮಾಡಿ ತಮಾಷೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments