Webdunia - Bharat's app for daily news and videos

Install App

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಬಾಲಕಿಗೆ ಕಿಡ್ನಿ ದಾನ ಮಾಡಿ ತಾಯಿ

Webdunia
ಸೋಮವಾರ, 21 ಫೆಬ್ರವರಿ 2022 (20:26 IST)
ಬೆಂಗಳೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ 12 ವರ್ಷದ ಬಾಲಕಿಗೆ ತನ್ನ ತಾಯಿಯೇ ಕಿಡ್ನಿ ದಾನ ಮಾಡಿದ್ದು, ಯಶಸ್ವಿಯಾಗಿ ಕಿಡ್ನಿ ಕಸಿ ಮಾಡಲಾಗಿದೆ. ಇದೇ ಮೊದಲ ಬಾರಿಗೆ ರೋಬೋ ಅಸಿಸ್ಟೆಡ್ ಪೀಡಿಯಾಟ್ರಿಕ್ ಮೂಲಕ ಕಿಡ್ನಿ ಕಸಿಯನ್ನು ಫೊರ್ಟಿಸ್ ಆಸ್ಪತ್ರೆ ವೈದ್ಯರ ತಂಡ ನಡೆಸಿದ್ದಾರೆ. 
 
ಈ ಕುರಿತು ಮಾತನಾಡಿದ ರೋಬೋಟಿಕ್ ಸರ್ಜರಿ ಮತ್ತು ಕಸಿ ವಿಭಾಗದ ನಿರ್ದೇಶಕ ಡಾ. ಮೋಹನ್ ಕೇಶವ ಮೂರ್ತಿ ಮಾತನಾಡಿ, ಕಳೆದ ಒಂದು ವರ್ಷದಿಂದ ಈ ಬಾಲಕಿಯು ಕಿಡ್ನಿಯನ್ನು ವೈಫಲ್ಯ ಮಾಡುವ ಲುಫುಸ್ ನೆಫ್ರಿಟಿಸ್ ರೋಗದಿಂದ ಬಳಲುತ್ತಿದ್ದು, ಡಯಾಲಿಸಿಸ್ ಮಾಡಲಾಗುತ್ತಿತ್ತು. ಬಾಲಕಿಯ ಆರೋಗ್ಯ ಕ್ಷೀಣಿಸುತ್ತಾ ಬಂದಿತು. ತ್ವರಿತವಾಗಿ ಕಿಡ್ನಿ ಕಸಿ ಮಾಡದಿದ್ದರೆ ಬಾಲಕಿ ಸಾವನ್ನಪ್ಪುವ ಸಾಧ್ಯತೆ ಹೆಚ್ಚಿತ್ತು. ಆದರೆ, ಕಿಡ್ನಿ ದಾನಿಗಳ ಕೊರತೆಯಿಂದ ಇದೂ ಸಹ ತಡವಾಗುತ್ತಿತ್ತು. ಈ ಸಂದರ್ಭದಲ್ಲಿ ತನ್ನ ತಾಯಿಯೇ ಕಿಡ್ನಿ ದಾನ ಮಾಡಲು ಮುಂದಾದರು. ಈ ವೇಳೆ ಕಾರ್ಯಪ್ರವೃತ್ತರಾದ ನಮ್ಮ ತಂಡ ಕಸಿ ನಡೆಸಲು ಮುಂದಾದವು. ಇದೇ ಮೊದಲ ಬಾರಿಗೆ ಫೊರ್ಟಿಸ್ ಆಸ್ಪತ್ರೆ ನೆಟ್‌ವರ್ಕ್‌ನಲ್ಲಿ ರೋಬೋಟ್ ಅಸಿಸ್ಟೆಡ್ ಪೀಡಿಯಾಟ್ರಿಕ್ ಮೂಲಕ ಕಸಿ ಮಾಡಲಾಯಿತು. ಈ ಚಿಕಿತ್ಸಾ ವಿಧಾನವು ರೋಬೋಟಿಕ್‌ನಿಂದ ಕೂಡಿರುವುದರಿಂದ ಹೈ ಟೆಕ್ನಾಲಜಿಯನ್ನು ಬಳಸಲಾಗಿದೆ. ಕಸಿ ಸಂದರ್ಭದಲ್ಲಾಗಲಿ ಅಥವಾ ನಂತರದಲ್ಲಿ ಆಗುವ ನೋವನ್ನು ಕಡಿಮೆಗೊಳಿಸುತ್ತದೆ.  ಚಿಕಿತ್ಸೆ ಬಳಿಕ ಬಾಲಕಿ ಸಂಪೂರ್ಣ ಗುಣಮುಖರಾಗಿದ್ದಾರೆ. ಕಳೆದ ಒಂದು ವರ್ಷದಿಂದ ವೀಲ್‌ಚೇರ್‌ನನ್ನು ಅವಲಂಬಿಸಿದ್ದ ಮಗು ಇದೀಗ ಚೇತರಿಸಿಕೊಂಡಿದೆ. ತಾಯಿಯೂ ಸಹ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments