Select Your Language

Notifications

webdunia
webdunia
webdunia
webdunia

ಕೃಷ್ಣರನ್ನು ಬಿಜೆಪಿಗೆ ಸೇರಿಸದಂತೆ ಮೋದಿಗೆ ಹಿರೇಮಠ್ ಪತ್ರ

ಕೃಷ್ಣರನ್ನು ಬಿಜೆಪಿಗೆ ಸೇರಿಸದಂತೆ ಮೋದಿಗೆ ಹಿರೇಮಠ್ ಪತ್ರ
ಹುಬ್ಬಳ್ಳಿ , ಭಾನುವಾರ, 19 ಮಾರ್ಚ್ 2017 (17:38 IST)
ಭೂ ಹಗರಣಗಳಲ್ಲಿ ಸಿಲುಕಿರುವ ಮಾಜಿ ಸಿಎಂ ಎಸ್.ಎಂ.ಕೃಷ್ಣರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸದಂತೆ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.
 
ಮಾಜಿ ಸಿಎಂ ಕೃಷ್ಣ ಅವರ ಅಳಿಯ ಅರಣ್ಯ ಭೂಮಿಯನ್ನು ಕಬಳಿಸಿದ ಆರೋಪ ಎದುರಿಸುತ್ತಿದ್ದಾರೆ. ಅಳಿಯನನ್ನು ರಕ್ಷಿಸಲು ಕೃಷ್ಣ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
 
ಎಸ್.ಎಂ.ಕೃಷ್ಣ ಅವರ ಅಳಿಯ ಸಿದ್ಧಾರ್ಥ ಭೂ ಕಬಳಿಕೆ ಬಗ್ಗೆ ತನಿಖೆ ನಡೆಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಲಾಗಿದೆ. ಯಾವುದೇ ಕ್ಷಣದಲ್ಲೂ ಅವರ ವಿರುದ್ಧದ ಭೂ ಹಗರಣಗಳ ಬಗ್ಗೆ ತನಿಖೆಗೆ ಆದೇಶ ಹೊರಬೀಳಲಿದೆ ಎಂದರು.
 
ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಪ್ರಧಾನಮಂತ್ರಿ ಮೋದಿ, ಅದು ಹೇಗೆ ಭ್ರಷ್ಟಾಚಾರ ಆರೋಪಗಳಲ್ಲಿ ಸಿಲುಕಿರುವವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುತ್ತಾರೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ್ ಪ್ರಶ್ನಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಪಕ್ಷವನ್ನು ಯಾರೂ ನಂಬಬಾರದು: ಕೆ.ಎಸ್.ಈಶ್ವರಪ್ಪ