Webdunia - Bharat's app for daily news and videos

Install App

ಕೃಷ್ಣರನ್ನು ಬಿಜೆಪಿಗೆ ಸೇರಿಸದಂತೆ ಮೋದಿಗೆ ಹಿರೇಮಠ್ ಪತ್ರ

Webdunia
ಭಾನುವಾರ, 19 ಮಾರ್ಚ್ 2017 (17:38 IST)
ಭೂ ಹಗರಣಗಳಲ್ಲಿ ಸಿಲುಕಿರುವ ಮಾಜಿ ಸಿಎಂ ಎಸ್.ಎಂ.ಕೃಷ್ಣರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸದಂತೆ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.
 
ಮಾಜಿ ಸಿಎಂ ಕೃಷ್ಣ ಅವರ ಅಳಿಯ ಅರಣ್ಯ ಭೂಮಿಯನ್ನು ಕಬಳಿಸಿದ ಆರೋಪ ಎದುರಿಸುತ್ತಿದ್ದಾರೆ. ಅಳಿಯನನ್ನು ರಕ್ಷಿಸಲು ಕೃಷ್ಣ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
 
ಎಸ್.ಎಂ.ಕೃಷ್ಣ ಅವರ ಅಳಿಯ ಸಿದ್ಧಾರ್ಥ ಭೂ ಕಬಳಿಕೆ ಬಗ್ಗೆ ತನಿಖೆ ನಡೆಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಲಾಗಿದೆ. ಯಾವುದೇ ಕ್ಷಣದಲ್ಲೂ ಅವರ ವಿರುದ್ಧದ ಭೂ ಹಗರಣಗಳ ಬಗ್ಗೆ ತನಿಖೆಗೆ ಆದೇಶ ಹೊರಬೀಳಲಿದೆ ಎಂದರು.
 
ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಪ್ರಧಾನಮಂತ್ರಿ ಮೋದಿ, ಅದು ಹೇಗೆ ಭ್ರಷ್ಟಾಚಾರ ಆರೋಪಗಳಲ್ಲಿ ಸಿಲುಕಿರುವವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುತ್ತಾರೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ್ ಪ್ರಶ್ನಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments