Webdunia - Bharat's app for daily news and videos

Install App

ನಮ್ಮನ್ನು ವಲಸಿಗರು ಅಂತ ಕರೀಬೇಡಿ: ಬಿಸಿ ಪಾಟೀಲ್

Webdunia
ಭಾನುವಾರ, 1 ಆಗಸ್ಟ್ 2021 (14:36 IST)
ನಮ್ಮನ್ನು ವಲಸಿಗರು ಮತ್ತು ಬಾಂಬ್ ಬಾಯ್ಸ್ ಅಂತ ಕರೆಯಬೇಡಿ ಎಂದು ಮಾಜಿ ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಲಸಿಗ, ಬಾಂಬೆ ಬಾಯ್ಸ್ ಎನ್ನುವ ಶಬ್ದ ಬಿಡಿ. ನಾವು ಬಿಜೆಪಿ ಪಕ್ಷಕ್ಕೆ ಬಂದು ಗೆದ್ದು ಮಂತ್ರಿ ಆಗಿದ್ದೇವೆ‌. ಹೀಗಿದ್ದರೂ ನೀವು ನಮ್ಮನ್ನು ವಲಸಿಗರು ಎಂದು
ಕರೆಯೋದು ಬಿಡಲ್ವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಂಪುಟ ರಚನೆ ಆಗಲಿ, ಈ ಮೊದಲು ಇದ್ದ ಇಲಾಖೆ ಬಗ್ಗೆ ನಾನು ಚರ್ಚೆ ಮಾಡಿಲ್ಲ. ನಮ್ಮ ಕೆಲಸದ ಬಗ್ಗೆ ಮುಖ್ಯಮಂತ್ರಿಗಳಿಗೆ ಗೊತ್ತಿದೆ. ಈಗಾಗಲೇ ಸಿಎಂ ಬೊಮ್ಮಾಯಿ ಅವರೇ ಹೇಳಿದ್ದಾರೆ ಎಂದು ಅವರು ಹೇಳಿದರು.
ಆದಷ್ಟು ಬೇಗ ಸಂಪುಟ ವಿಸ್ತರಣೆ ಮಾಡ್ತೇನೆ ಅಂತ ಬೊಮ್ಮಾಯಿ ಅವರು ಹೇಳಿದ್ದಾರೆ. ನಮಗೆ ಸಚಿವ ಸ್ಥಾನ ನೀಡುವುದು ಹಾಗೂ ಸಚಿವ ಸ್ಥಾನ ನೀಡಿದರೆ ಯಾವ ಖಾತೆ ನೀಡಬೇಕು ಎಂಬುದನ್ನು ಅವರೇ ತೀರ್ಮಾನಿಸುತ್ತರೆ ಎಂದು ಬಿಸಿ ಪಾಟೀಲ್ ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments