Select Your Language

Notifications

webdunia
webdunia
webdunia
webdunia

ಶಿವಣ್ಣನ ನೋಡಲು ಆಸ್ಪತ್ರೆಗೆ ಯಾರೂ ಬರಬೇಡಿ: ಗೀತಾ

ಶಿವಣ್ಣನ ನೋಡಲು ಆಸ್ಪತ್ರೆಗೆ ಯಾರೂ ಬರಬೇಡಿ: ಗೀತಾ
ಬೆಂಗಳೂರು , ಮಂಗಳವಾರ, 6 ಅಕ್ಟೋಬರ್ 2015 (16:53 IST)
ನಟ ಶಿವರಾಜ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದರೂ ಕೂಡ ಎಂದಿನಂತೆ ಆರೋಗ್ಯವಾಗಿದ್ದು, ಈಗ ತಾನೆ ಊಟ ಮಾಡಿದ್ದಾರೆ ಎಂಬುದಾಗಿ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಇಂದು ಮಾಹಿತಿ ನೀಡಿದ್ದಾರೆ. 
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವರಾಜ್ ಕುಮಾರ್ ಇಂದು ಬೆಳಗ್ಗೆ ವ್ಯಾಯಾಮ ಮಾಡುತ್ತಿದ್ದ ವೇಳೆಯಲ್ಲಿ ಅವರ ಬಲ ಭುಜದಲ್ಲಿ ನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ನಾವು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಿದ್ದೆವು. ಬಳಿಕ ಉತ್ತಮ ಚಿಕಿತ್ಸೆಗಾಗಿ ನಮ್ಮ ಕುಟುಂಬಕ್ಕೆ ಹತ್ತಿರವಿರುವ ಡಾ. ಶ್ರೀನಿವಾಸ್ ಬಳಿ ತಪಾಸಣೆ ಮಾಡಿಸಲೆಂದು ಮತ್ತೆ ಮಲ್ಯ ಆಸ್ಪತ್ರೆಗೆ ಕರೆ ತಂದಿದ್ದೆವು. ಈ ಹಿನ್ನೆಲೆಯಲ್ಲಿ ಇಸಿಜಿ ಹಾಗೂ ಆಂಜಿಯೋಗ್ರಾಂ ಪರೀಕ್ಷೆ ನಡೆಸಲಾಗಿದ್ದು, ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿರುವುದಾಗಿ ಮಾಹಿತಿ ನೀಡಿದರು.
 
ಇದೇ ವೇಳೆ, ಶಿವಣ್ಣ ಎಂದಿನಂತೆ ಆರೋಗ್ಯವಾಗಿದ್ದು, ಇಂದು ಸಂಜೆ ಅಥವಾ ನಾಳೆ ಡಿಸ್ ಚಾರ್ಜ್ ಆಗಲಿದ್ದಾರೆ. ಆ ಬಳಿಕ ಅವರೇ ಮಾದ್ಯಮಗಳೆದುರು ಕಾಣಿಸಿಕೊಳ್ಳಲಿದ್ದಾರೆ ಆದ ಕಾರಣ ಅವರನ್ನು ನೋಡಲೆಂದು ಅಭಿಮಾನಿಗಳು ಯಾರೂ ಕೂಡ ಆಸ್ಪತ್ರೆಯ ಬಳಿ ಬರೇಬೇಡಿ. ಏಕೆಂದರೆ ಇತರೆ ರೋಗಿಗಳಿರುವ ಕಾರಣ ಅವರಿಗೆ ತೊಂದರೆಯಾಗಲಿದೆ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದರು. 
 
ಇನ್ನು ಇಂದು ಬೆಳಗ್ಗೆ ವ್ಯಾಯಾಮ ಮಾಡುತ್ತಿದ್ದ ವೇಳೆಯಲ್ಲಿ ತಮ್ಮ ಬಲ ಭುಜದಲ್ಲಿ ನೋವು ಕಾಣಿಸಿಕೊಂಡಿದೆ ಎಂಬ ಕಾರಣದಿಂದ ನಟ ಶಿವರಾಜ್ ಕುಮಾರ್ ಅವರು ಮಲ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ ಯಾವುದೇ ತೊಂದರೆ ಇಳ್ಲದೆ ಶಿವರಾಜ್ ಕುಮಾರ್ ಆರೋಗ್ಯವಾಗಿದ್ದಾರೆ ಎಂಬುದಾಗಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. 

Share this Story:

Follow Webdunia kannada