Publish Date: Sat, 24 Feb 2018 (11:37 IST)
Updated Date: Sat, 24 Feb 2018 (11:47 IST)
ಬಳ್ಳಾರಿ : ಮಾಜಿ ಸಚಿವ, ಹಡಗಲಿ ಶಾಸಕ ಪರಮೇಶ್ವರ್ ನಾಯ್ಕ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬಾರದು ಬದಲಾಗಿ ಯುವಕರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ವೀಕ್ಷಕರಲ್ಲಿ ಮನವಿ ಮಾಡಿದ್ದಾರೆ.
ಪರಮೇಶ್ವರ್ ನಾಯ್ಕ್ ದುರಂಹಕಾರಿ. ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ಇತಂಹವರಿಗೆ ಟಿಕೆಟ್ ನೀಡಿದ್ರೆ ಪಕ್ಷಕ್ಕೆ ಸೋಲು ಕಟ್ಟಿಟ್ಟ ಬುತ್ತಿ ಎಂದು ತಿಳಿಸಿದ ಕಾಂಗ್ರೆಸ್ ಕಾರ್ಯಕರ್ತರು ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಡಿ ಎಂದು ಕಾಂಗ್ರೆಸ್ ವೀಕ್ಷಕರಿಗೆ ದೂರು ನೀಡಿದ್ದು, ಒಂದು ವೇಳೆ ಪರಮೇಶ್ವರ್ ನಾಯ್ಕ್ ಗೆ ಟಿಕೆಟ್ ನೀಡಿದ್ರೆ ನಾವು ಪಕ್ಷದ ಪರವಾಗಿ ಕೆಲಸ ಮಾಡಲ್ಲವೆಂದು ಕಾರ್ಯಕರ್ತರು ವೀಕ್ಷಕರಿಗೆ ಎಚ್ಚರಿಕೆ ಕೂಡ ನೀಡಿದ್ದಾರೆ. ಹಾಗೆ ಯುವ ಮುಖಂಡ ಕೃಷ್ಣ ನಾಯ್ಕ್ ಸೇರಿ ಒಟ್ಟು 9 ಆಕ್ಷಾಂಕಿಗಳು ಕಾಂಗ್ರೆಸ್ ವೀಕ್ಷಕರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ