Webdunia - Bharat's app for daily news and videos

Install App

ಪ್ರಾಣಕ್ಕಾಗಿ ಸತ್ಯವನ್ನು ಮುಚ್ಚಿಡಬೇಡಿ ಎಂದು ಸಲಹೆ ನೀಡುತ್ತಿದ್ದರು ತಂದೆ: ರೂಪದರ್ಶಿ

Webdunia
ಭಾನುವಾರ, 30 ಆಗಸ್ಟ್ 2015 (15:57 IST)
ಅಪರಿಚಿತ ವ್ಯಕ್ತಿಗಳ ಗುಂಡಿಗೆ ಬಲಿಯಾದ ಹಿರಿಯ ಸಂಶೋಧಕ ಎಂ.ಎಂ.ಕಲಬುರ್ಗಿ ತಂದೆಯ ಹತ್ಯೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಾಣಕ್ಕಾಗಿ ಸತ್ಯವನ್ನು ಮುಚ್ಚಿಡಬೇಡಿ ಎಂದು ಸಲಹೆ ನೀಡುತ್ತಿರುವುದಾಗಿ ಕಲಬುರ್ಗಿಯವರ ಪುತ್ರಿ ರೂಪದರ್ಶಿ ತಿಳಿಸಿದ್ದಾರೆ.  
 
ತಂದೆಯವರು ತಮ್ಮ ಮನಸ್ಸಿಗೆ ತೋಚಿದ್ದನ್ನು ನಿರ್ಭಿತಿಯಿಂದ ಹೇಳುತ್ತಿದ್ದರು. ಅವರಿಗೆ ಯಾರ ಬಗ್ಗೆಯೂ ಅಸಮಾಧಾನವಿರಲಿಲ್ಲ. ಕೇವಲ ಸತ್ಯಕ್ಕಾಗಿ ಮಾತ್ರ ಹೋರಾಟ ಮುಂದುವರಿಸಿದ್ದರು ಎಂದು ಹೇಳಿದ್ದಾರೆ.
 
ತಂದೆಯವರ ಸಾವಿನಿಂದ ಸಂಪೂರ್ಣ ರಾಜ್ಯ. ಆಘಾತಗೊಂಡಿದೆ. ಅಂಬಳಿ ಕಂಬಳಿ ಮಾತ್ರ ಆಸ್ತಿ ಉಳಿದಿದ್ದು ಜಾಸ್ತಿ ಎಂದು ಹೇಳುತ್ತಿದ್ದರು, ಮನೆಯಲ್ಲಿ ಯಾವುದೇ ಕೌಟಂಬಿಕ ಸಮಸ್ಯೆಗಳಿರಲಿಲ್ಲ. ಶಾಂತಿ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದರು ಎಂದು ತಿಳಿಸಿದ್ದಾರೆ.
 
ನಮ್ಮ ತಂದೆಗೆ ಕುಟುಂಬದಲ್ಲಿ ಯಾರೂ ಶತ್ರುಗಳಿರಲಿಲ್ಲ. ಜೀವ ಬೆದರಿಕೆ ಕರೆಗಳು ಬಂದಿರಲಿಲ್ಲ. ಹೊರಗಿನ ವ್ಯಕ್ತಿಗಳೇ ಅವರ ಹತ್ಯೆ ಮಾಡಿರಬಹುದು ಎಂದು ರೂಪದರ್ಶಿ ತಮ್ಮ ಸಂಶಯ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments