ಕಾವೇರಿ ವಿವಾದ ವಿಚಾರಣೆ ಕೋರ್ಟ್ನಲ್ಲಿ ಮುಂದುವರಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯಿಂದ ಹೆಚ್ಚು ನಿರೀಕ್ಷಿಸಲು ಆಗಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ನವದೆಹಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ಮಧ್ಯಪ್ರವೇಶ ಕುರಿತಂತೆ ಸಿಎಂ ಸಿದ್ದರಾಮಯ್ಯನವರ ಪತ್ರದ ವಿಚಾರದ ಬಗ್ಗೆ ಕೂಡಾ ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ.
ಕಾವೇರಿ ವಿವಾದ ಕುರಿತಂತೆ ಹಲವು ವಿಷಯಗಳ ಬಗ್ಗೆ ಪ್ರಧಾನಿ ಮೋದಿಯವರೊಂದಿಗೆ ಚರ್ಚೆ ನಡೆಸಿದ್ದೇನೆ. ಆದರೆ, ಕಾವೇರಿ ವಿವಾದ ಕುರಿತಂತೆ ನಾನು ಮನವಿ ಪತ್ರ ನೀಡಿಲ್ಲ. ಎಲ್ಲಾ ವಿಷಯಗಳನ್ನು ಮೋದಿ ಮೌನವಾಗಿ ಆಲಿಸಿದರು ಎಂದು ಮಾಹಿತಿ ನೀಡಿದ್ದಾರೆ.
ಕಾವೇರಿ ಪ್ರತಿಭಟನೆಯ ಬಗ್ಗೆ ಪ್ರಧಾನಿ ಮೋದಿ ಗುಪ್ತಚರ ಇಲಾಖೆಯ ಅಧಿಕಾರಿಗಳ ಮೂಲಕ ಕರ್ನಾಟಕ ಬಂದ್ ವರದಿಯನ್ನು ತರಿಸಿಕೊಂಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ