Select Your Language

Notifications

webdunia
webdunia
webdunia
webdunia

ಆವೇಶಕ್ಕೊಳಗಾಗಿ ರಾಜೀನಾಮೆ ಬೇಡ: ಶೆಣೈಗೆ ಯಡಿಯೂರಪ್ಪ ಮನವಿ

ಆವೇಶಕ್ಕೊಳಗಾಗಿ ರಾಜೀನಾಮೆ ಬೇಡ: ಶೆಣೈಗೆ ಯಡಿಯೂರಪ್ಪ ಮನವಿ
ಬೆಂಗಳೂರು , ಬುಧವಾರ, 8 ಜೂನ್ 2016 (15:37 IST)
ಆವೇಶಕ್ಕೊಳಗಾಗಿ ಕೂಡ್ಲಿಗಿ ಡಿವೈಎಸ್‌ಪಿ ಅನುಪಮಾ ಶೆಣೈ ಅವರು ರಾಜೀನಾಮೆ ನೀಡಬಾರದೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಡಿವೈಎಸ್‌ಪಿ ಅನುಪಮಾ ಶೆಣೈ ಅವರು ಪ್ರಾಮಾಣಿಕ ಮತ್ತು ದಕ್ಷ ಅಧಿಕಾರಿ. ಅವರು ಆವೇಶಕ್ಕೊಳಗಾಗಿ ರಾಜೀನಾಮೆ ನೀಡುವುದು ಸರಿಯಲ್ಲ. ಅವರು ಮತ್ತೆ ಕರ್ತವ್ಯಕ್ಕೆ ಹಾಜರಾಗಬೇಕು. ನೀವು ನಿರಂತರವಾಗಿ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಬೇಕು ಎಂದು ಹೇಳಿದ್ದಾರೆ. 
 
ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ನಾಯ್ಕ ತಮ್ಮ ನಡುವಳಿಕೆಯನ್ನು ತಿದ್ದುಕೊಳ್ಳಬೇಕು. ರಾಜ್ಯ ಸರಕಾರದ ಸಚಿವರಿಂದ ಸರಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಕಾಂಗ್ರೆಸ್ ಮಿತಿಮೀರಿ ವರ್ತಿಸುತ್ತಿದೆ: ದೇವೇಗೌಡ