Webdunia - Bharat's app for daily news and videos

Install App

ಮಣ್ಣು ಮಾರಿಕೊಂಡವರು ನೀಡುವ ಹಣದ ಆಸೆಗೆ ಮತ ಮಾರಿಕೊಳ್ಳಬೇಡಿ: ಕುಮಾರಸ್ವಾಮಿ

Webdunia
ಗುರುವಾರ, 2 ಫೆಬ್ರವರಿ 2017 (10:40 IST)
ಭೂತಾಯಿ ಗರ್ಭ ಸೀಳಿ ಮಣ್ಣು ಮಾರಿಕೊಂಡವರು ನೀಡುವ ಹಣದ ಆಸೆಗೆ ನಿಮ್ಮ ಅಮೂಲ್ಯವಾದ ಮತವನ್ನು ಮಾರಿಕೊಳ್ಳಬೇಡಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪರೋಕ್ಷವಾಗಿ ರೆಡ್ಡಿ ಬ್ರದರ್ಸ್‌ಗೆ ಟಾಂಗ್ ನೀಡಿದ್ದಾರೆ.
 
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿ ಕುಮಾರಸ್ವಾಮಿ ಅವರೇ ಸಿಎಂ ಆಗುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಹಾಗೇ ಮಾಡಬೇಡಿ, ಒಂದು ಭಾರಿ ನನಗೆ ಪೂರ್ಣ ಬಹುಮತ ಕೊಡಿ. ನಿಮ್ಮನ್ನು ಸ್ವಾವಲಂಬಿಗಳಾಗಿ ಬದುಕುವಂತೆ ಮಾಡುವುದು ನನ್ನ ಜವಾಬ್ದಾರಿ ಎಂದು ಭರವಸೆ ನೀಡಿದರು. 
 
ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರಕಾರದಲ್ಲಿ ನನಗೆ ದೊರೆತ 20 ತಿಂಗಳಲ್ಲಿ ರಾಜ್ಯದ ರೈತರು, ಬಡವರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ವರ್ಗದವರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದೇನೆ. ಅಂದಿನ ಹಣಕಾಸು ಸಚಿವ ಬಿ.ಎಸ್.ಯಡಿಯೂರಪ್ಪ ರೈತರ ಸಾಲ ಮನ್ನಾ ಮಾಡಲು ಸಾಕಷ್ಟು ವಿರೋಧಿಸಿದರು ಎಂದು ಆರೋಪಿಸಿದರು. 
 
ಮುಂಬರುವ ವಿಧಾನಸಭೆಯಲ್ಲಿ ಜೆಡಿಎಸ್ ಸರಕಾರ ಅಸ್ತಿತ್ವಕ್ಕೆ ಬಂದಲ್ಲಿ ಕೇವಲ 24 ಗಂಟೆಯೊಳಗೆ ರೈತರ ಸಾಲ ಮಾನ್ನಾ ಮಾಡುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಶ್ವಾಸನೆ ನೀಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ಮೇಲೆ ಅಮೆರಿಕೆ ಏರ್‌ಸ್ಟ್ರೈಕ್‌‌: ಡೊನಾಲ್ಡ್ ಟ್ರಂಪ್ ಗಂಡೆದೆಯನ್ನು ಕೊಂಡಾಡಿದ ಇಸ್ರೇಲ್ ಪ್ರಧಾನಿ

ಪಹಲ್ಗಾಮ್‌ ದಾಳಿ: ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್‌

ಸ್ಟೇಟ್ ಸ್ಪಾನ್ಸರ್ ಕರಪ್ಷನ್‌ಗೆ ರಾಜ್ಯದ ಕಾಂಗ್ರೆಸ್‌ ಸರ್ಕಾರವೇ ಉತ್ತೇಜನ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪ

ಸ್ನೇಹಿತರೊಂದಿಗೆ ತೋಟದ ಮನೆಗೆ ಪಾರ್ಟಿಗೆ ತೆರಳಿದ್ದ ಯುವಕರಿಬ್ಬರು ಕೃಷಿಹೊಂಡದಲ್ಲಿ ಜಲಸಮಾಧಿ

ಏರ್‌ಸ್ಟ್ರೈಕ್‌ಗೆ ಕ್ಯಾರೇ ಎನ್ನದ ಇರಾನ್‌: ಇಸ್ರೇಲ್‌ ಮೇಲೆ ಮಿಸೈಲ್‌ಗಳ ಸುರಿಮಳೆ, ಗಗನಚುಂಬಿ ಕಟ್ಟಡಗಳಿಗೆ ಹಾನಿ

ಮುಂದಿನ ಸುದ್ದಿ
Show comments