Select Your Language

Notifications

webdunia
webdunia
webdunia
webdunia

ಕಾನೂನು ಕೈಗೆತ್ತಿಕೊಂಡಲ್ಲಿ ಕಠಿಣ ಕ್ರಮ: ಸಿಎಂ ಖಡಕ್ ಎಚ್ಚರಿಕೆ

ಕಾನೂನು ಕೈಗೆತ್ತಿಕೊಂಡಲ್ಲಿ ಕಠಿಣ ಕ್ರಮ: ಸಿಎಂ ಖಡಕ್ ಎಚ್ಚರಿಕೆ
ಬೆಂಗಳೂರು , ಶನಿವಾರ, 8 ಜುಲೈ 2017 (18:15 IST)
ಕಾನೂನು ಕೈಗೆತ್ತಿಕೊಂಡಲ್ಲಿ ಯಾವುದೇ ಸಮುದಾಯದವರಾಗಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.
 
ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು ಪೊಲೀಸರ ನಿಯಂತ್ರಣದಲ್ಲಿದೆ. ಹಿಂದು ಸಮುದಾಯದವರಾಗಲಿ ಅಥವಾ ಬೇರೆ ಸಮುದಾಯದವರಾಗಲಿ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಸಲಹೆ ನೀಡಿದ್ದಾರೆ.
 
ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಅಂತ್ಯ ಸಂಸ್ಕಾರ ಸಂದರ್ಭದಲ್ಲಿ ಕೆಲವೆಡೆ ಕಲ್ಲು ತೂರಾಟ ನಡೆದು ಪರಿಸ್ಥಿತಿ ವಿಕೋಪಕ್ಕೆ ತೆರಳಿತ್ತು. ಬಂಟ್ವಾಳದಾದ್ಯಂತ ನಿಷೇಧಾಜ್ಞೆ ಹೇರಲಾಗಿದ್ದು ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ವಿವರಣೆ ನೀಡಿದ್ದಾರೆ.
 
ರಾಜ್ಯದಲ್ಲಿ ಶಾಂತಿಯತ ವಾತಾವರಣ ಸೃಷ್ಟಿಸಲು ಪ್ರತಿಯೊಂದು ಸಮುದಾಯವು ಕೈಜೋಡಿಸಬೇಕು. ಹಿಂದು, ಮುಸ್ಲಿಂ ಎನ್ನುವ ಭೇಧ ಭಾವ ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸಿದ್ದರಾಮಯ್ಯ ಕೈಗೆ ರಕ್ತ ಅಂಟಿಕೊಂಡಿದೆ: ಕರಂದ್ಲಾಜೆ