Webdunia - Bharat's app for daily news and videos

Install App

ಬೆಂಗಳೂರನ್ನೇ ಬೆಚ್ಚಿ ಬೀಳಿಸಿತು ಪಾಪಿ ಅಳಿಯನ ಬೀಭತ್ಸ ಕೃತ್ಯ

Webdunia
ಶನಿವಾರ, 4 ಮಾರ್ಚ್ 2017 (08:21 IST)
ಕ್ಷುಲ್ಲಕ ಕಾರಣಕ್ಕಾಗಿ ಪಾಪಿ ಅಳಿಯನೋರ್ವ ಅತ್ತೆ-ಮಾವ, ಪತ್ನಿ ಸೇರಿದಂತೆ ನಾಲ್ವರ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದು ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ ಮತ್ತಿಬ್ಬರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಕೋಣನಕುಂಟೆಯ ಅನ್ನಪೂರ್ಣೇಶ್ವರಿ ನಗರದಲ್ಲಿ ಈ ದಾರುಣ ಘಟನೆ ನಡೆದಿದೆ.
ಮುರುಗಮ್ಮ, ಕುಮಾರ್ ಕೊಲೆಯಾದ ದಂಪತಿ. ಅವರ ಮಗಳಾದ ಸತ್ಯಾ ಪತಿ ಸೆಂಥಿಲ್ ಕುಮಾರ್ ನಿನ್ನೆ ಈ ಹೇಯ ಕೃತ್ಯವನ್ನೆಸಗಿದ್ದಾನೆ. ಚಾಕುವಿನಿಂದ ಮನಬಂದಂತೆ ಅತ್ತೆ ಮಾವ ಮತ್ತು ಪತ್ನಿಯ ಮೇಲಾತ ದಾಳಿ ನಡೆಸಿದ್ದಾನೆ. ಸಹಾಯಕ್ಕಾಗಿ ಬಂದಿದ್ದ ಪಕ್ಕದ ಮನೆಯವರ ಮಂಜುನಾಥ್ ಮೇಲೂ ದಾಳಿ ನಡಸಿದ್ದಾನೆ. ಪರಿಣಾಮ ಅತ್ತೆ- ಸ್ಥಳದಲ್ಲೇ ಸಾವನ್ನಪ್ಪಿದರೆ ಮಾವ ಕುಮಾರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಗಾಯಗೊಂಡಿರುವ ಆತನ ಪತ್ನಿ ಮತ್ತು ಮಂಜುನಾಥ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
 
ಆರೋಪಿಯ ಪುಟ್ಟ ಮಗುವನ್ನು ನೆರೆಮನೆಯವರು ಎತ್ತಿಕೊಂಡು ಹೋಗಿ ರಕ್ಷಿಸಿದ್ದಾರೆ.
 
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 
ಕೃತ್ಯ ನಡೆಸಿದ ಬಳಿಕ ಆರೋಪಿ ಅಲ್ಲಿಂದ ಪರಾರಿಯಾಗಿದ್ದು ಆತನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments