Publish Date: Thu, 09 Dec 2021 (20:13 IST)
Updated Date: Thu, 09 Dec 2021 (20:16 IST)
ತಮಿಳು ನಾಡಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಭಾರತದ ರಕ್ಷಣಾ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಪತ್ನಿ ಸೇರಿ 13ಮಂದಿ ಮೃತಪಟ್ಟಿದ್ದರು. ಬಿಪಿನ್ ರಾವತ್ ನಿಧನದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಹಲವು ನೆಟ್ಟಿಗರು ದುರಂತದ ಬಗ್ಗೆ ಸಂಶಯ ವ್ಯಕ್ತಪಡಿಸಿ ಕಮೆಂಟ್ ಗಳನ್ನು ಮಾಡಿದ್ದಾರೆ.
ಈ ಬಗ್ಗೆ ಕುದ್ದು ಬಿಜೆಪಿ ಸಂಸದ ಸುಬ್ರಹ್ಮಣ್ಯಯನ್ ಸ್ವಾಮಿ ಮಾದ್ಯಮಗಳ ಜೊತೆ ಮಾತನಾಡುತ್ತಾ,ಹೆಲಿಕಾಪ್ಟರ್ ದುರಂತ ಪ್ರಕರಣ ಸುಪ್ರೀಂ ಕೋರ್ಟ್ ಜಡ್ಜ್ ನೇತೃತ್ವದ ಸಮಿತಿ ಮೂಲಕ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ಪ್ರಧಾನಿ ದೇಶದ ಜನತೆಗೆ ರಕ್ಷಣಾ ಮುಖ್ಯಸ್ಥರ ಸಾವಿನ ಬಗ್ಗೆ ಸರಿಯಾದ ಉತ್ತರವನ್ನು ನೀಡಬೇಕು. ಉತ್ತರ ಎಲ್ಲಾ ಜನರ ವಿಶ್ವಾಸಕ್ಕೆ ಬರುವ ರೀತಿ ಇರಬೇಕು ಎಂದು ಆಗ್ರಹಿಸಿದ್ದಾರೆ.