Webdunia - Bharat's app for daily news and videos

Install App

ಶೀಘ್ರವೇ ಗ್ಯಾರಂಟಿ ಯೋಜನೆ ಜಾರಿ ಅನುಮಾನ

Webdunia
ಮಂಗಳವಾರ, 23 ಮೇ 2023 (12:48 IST)
5 ಗ್ಯಾರಂಟಿಗಳ ಪೈಕಿ 4 ಗ್ಯಾರಂಟಿಗಳಿಗೆ ಫಲಾನುಭವಿಗಳ ಅಂಕಿಅಂಶ ಅಗತ್ಯವಿದೆ. 10 ಕೆ.ಜಿ ಅಕ್ಕಿ ಗ್ಯಾರಂಟಿಯನ್ನು ಬಿಪಿಎಲ್ ಕಾರ್ಡ್ದಾರರಿಗೆ ಕೊಟ್ಟು ನಿಭಾಯಿಸಬಹುದು. ಆದರೆ ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಯೋಜನೆ ಜಾರಿಗೆ ಸರಿಯಾದ ಅಂಕಿಅಂಶಗಳು ಬೇಕು.

200 ಯೂನಿಟ್ ಉಚಿತ ವಿದ್ಯುತ್ಗೆ ಎಷ್ಟು ಫಲಾನುಭವಿಗಳು ಇದ್ದಾರೆ ಎಂಬ ಮಾಹಿತಿ ಇಲ್ಲ. ಯಾರಿಗೆ ಕೊಡಬೇಕು ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ತಮ್ಮ ಪ್ರಚಾರ ಭಾಷಣದಲ್ಲಿ ಜನರಿಗೆ, ಸರ್ಕಾರಿ ನೌಕರರಿಗೂ ಉಚಿತ ವಿದ್ಯುತ್ ನೀಡಲಾಗುತ್ತದೆ. ಜೂನ್ ತಿಂಗಳಿನಿಂದ ಯಾರೂ ವಿದ್ಯುತ್ ಬಿಲ್ ಪಾವತಿಸಬೇಡಿ ಎಂದು ಘೋಷಣೆ ಮಾಡಿದ್ದರು. ಈ 200 ಯೂನಿಟ್ ಫ್ರೀ ವಿದ್ಯುತ್ಗೆ 1,200 ಕೋಟಿ ರೂ. ತಗಲಬಹುದು ಎಂದು ಸರ್ಕಾರ ಅಂದಾಜು ಮಾಡಿದೆ. 

ಗೃಹಲಕ್ಷ್ಮಿ ಫಲಾನುಭವಿಗಳ ಮಾಹಿತಿಯೂ ಇಲ್ಲ. ಫಲಾನುಭವಿಗಳ ಬ್ಯಾಂಕ್ ಖಾತೆ ವಿವರವೂ ಇಲ್ಲ. ಉಚಿತ ಬಸ್ ಪಾಸ್ ಎಷ್ಟು ಜನರಿಗೆ ಕೊಡಬೇಕು ಎಂಬ ಅಂಕಿಅಂಶಗಳು ಇಲ್ಲ. ಮೊದಲ ಕ್ಯಾಬಿನೆಟ್ನಲ್ಲಿ  ಕರ್ನಾಟಕದ ಮಹಿಳೆಯರಿಗೆ ಮಾತ್ರ ಎಂದು ಸಿದ್ದರಾಮಯ್ಯ ಹೇಳಿದ್ದರು. ಪ್ರಚಾರ ಭಾಷಣದಲ್ಲಿ ಡಿಕೆ ಶಿವಕುಮಾರ್ ರಾಜ್ಯದ ಎಲ್ಲಾ ಕಡೆ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಮಹಿಳೆಯರು ಉಚಿತವಾಗಿ ಸಂಚಾರ ಮಾಡಬಹುದು ಎಂದು ಭರವಸೆ ನೀಡಿದ್ದರು.

ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು ನೀಡುವ ಯುವ ನಿಧಿ  ಭತ್ಯೆಗೆ ಫಲಾನುಭವಿಗಳ ಸಂಖ್ಯೆ ಕಂಡುಹಿಡಿಯುವುದು ಹೇಳಿದಷ್ಟು ಸುಲಭವಿಲ್ಲ. ಕೇಂದ್ರ ಸರ್ಕಾರ ರೈತರಿಗೆ ನೀಡುವ ಕೃಷಿ ಸಮ್ಮಾನ್ ಯೋಜನೆಯಲ್ಲಿ ರೈತರ ಕೃಷಿ ಭೂಮಿ ಲಿಂಕ್ ಆಗಿರುತ್ತದೆ. ಈ ಕಾರಣಕ್ಕೆ ಭೂಮಿ ಹೊಂದಿರುವ ರೈತರ ಖಾತೆಗಳಿಗೆ ಮಾತ್ರ ಹಣ ಜಮೆ ಆಗುತ್ತದೆ. ಆದರೆ ಇಲ್ಲಿ ನಿರುದ್ಯೋಗಿ ಎಂದು  ಕಂಡು ಹಿಡಿಯುವುದು ಹೇಗೆ? ಮಾನದಂಡ ಏನು ಎನ್ನುವುದೇ ಸದ್ಯದ ಕುತೂಹಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments