Webdunia - Bharat's app for daily news and videos

Install App

ಗಂಡ, ಅತ್ತೆಯ ವರದಕ್ಷಿಣೆ ಕಾಟಕ್ಕೆ ಗೃಹಿಣಿ ಆತ್ಮಹತ್ಯೆ

Webdunia
ಸೋಮವಾರ, 5 ಜುಲೈ 2021 (13:41 IST)
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಬಿಳಿಗೆರೆ ನಿವಾಸಿ ಸೌಮ್ಯಾ (26) ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಮೂರು ವರ್ಷದ ಹಿಂದೆ ಮೈಸೂರಿನ ಆಲನಹಳ್ಳಿ ನಿವಾಸಿ ಗೌತಮ್ ಎಂಬಾತನ ಜೊತೆ ಸೌಮ್ಯಾಳನ್ನು ಮದುವೆ ಮಾಡಿಕೊಡಲಾಗಿತ್ತು. ಅತ್ತೆ ಹಾಗೂ ಗಂಡ ಪದೆ ಪದೇ ಹಣಕ್ಕಾಗಿ ಪೀಡಿಸುತ್ತಿದ್ದರಿಂದ ಕಳೆದ ಆರು ತಿಂಗಳಿಂದ ಸೌಮ್ಯಾ ತವರು ಮನೆ ಸೇರಿದ್ದರು.
ಸೌಮ್ಯಾ ತವರು ಮನೆಯಲ್ಲಿ ಇದ್ದರೂ ಪೋನ್ ಮಾಡಿ ಗೌತಮ್ ಹಣ ತರುವಂತೆ ಪೀಡಿಸುತ್ತಿದ್ದ. ಸಾಲ ಮಾಡಿ ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ದ ಸೌಮ್ಯ ಕುಟುಂಬದವರು, ಮದುವೆ ವೇಳೆ ಚಿನ್ನ, ಬೆಳ್ಳಿಯನ್ನು ಕೂಡಾ ಕೊಟ್ಟಿದ್ದರು. ಅಲ್ಲದೇ ವರದಕ್ಷಿಣ ಕಾಟ ತಾಳಲಾರೇ ನಂತರ ಮೂರು ಲಕ್ಷ ಹಣವನ್ನು ಕೊಟ್ಟಿದ್ದರು.
ಎಲ್ಲಾ ಕೊಟ್ಟ ಮೇಲೂ ಮತ್ತೆ ಒಂದು ಲಕ್ಷ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಗೌತಮ್ ಮತ್ತು ಅತ್ತೆ ಕಿರುಕುಳ ನೀಡುತ್ತಿದ್ದರಿಂದ ಬೇಸತ್ತ ಗೃಹಿಣಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂಜನಗೂಡಿನ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments