ಕ್ರಿಶ್ಚಿಯನ್ ಬ್ರಾಹ್ಮಣ ಎಂದರೆ ಯಾವ ಜಾತಿ ಹೇಳ್ರೀ: ಶಾಸಕ ಭರತ್ ಶೆಟ್ಟಿ ಪ್ರಶ್ನೆಗೆ ತೊದಲಿದ ಡಿಸಿ

Krishnaveni K
ಗುರುವಾರ, 18 ಸೆಪ್ಟಂಬರ್ 2025 (11:11 IST)
ಮಂಗಳೂರು: ಕ್ರಿಶ್ಚಿಯನ್ ಬ್ರಾಹ್ಮಣ  ಎಂದರೆ ಯಾವ ಜಾತಿ ಹೇಳಿ ಎಂದು ಮಂಗಳೂರು ನಗರ ಶಾಸಕ ಡಾ ಭರತ್ ಶೆಟ್ಟಿ ಪ್ರಶ್ನೆಗೆ ಡಿಸಿ ಉತ್ತರ ಹೇಳಲಾಗದೇ ತೊದಲಿದ್ದಾರೆ. ಈ ವಿಡಿಯೋವನ್ನು ಖುದ್ದು ಭರತ್ ಶೆಟ್ಟಿ ಹಂಚಿಕೊಂಡಿದ್ದಾರೆ.

ಜಾತಿಗಣತಿ ಬಗ್ಗೆ ನಗರದಲ್ಲಿ ಸಭೆಯಲ್ಲಿ ಸ್ಪೀಕರ್ ಯುಟಿ ಖಾದರ್, ಮಂಗಳೂರು ಡಿಸಿ ಸೇರಿದಂತೆ ಜನಪ್ರತಿನಿಧಿಗಳು, ನಾಗರಿಕರು ಸೇರಿದ್ದರು. ಈ ವೇಳೆ ಸಭೆಯಲ್ಲಿ ಡಾ ಭರತ್ ಶೆಟ್ಟಿ ಜಾತಿ ಕಾಲಂನಲ್ಲಿ ಕ್ರಿಶ್ಚಿಯನ್ ಬ್ರಾಹ್ಮಣ, ಕ್ರಿಶ್ಚಿಯನ್ ಕುರುಬ ಎಂದೆಲ್ಲಾ ನಮೂದಾಗಿರುವುದನ್ನು ಪ್ರಶ್ನೆ ಮಾಡಿದ್ದಾರೆ.

ಇದ್ಯಾವುದು 'ಮಡಿವಾಳ ಕ್ರಿಶ್ಚಿಯನ್, ಬಂಟ ಕ್ರಿಶ್ಚಿಯನ್, ಬಿಲ್ಲವ ಕ್ರಿಶ್ಚಿಯನ್, ಗೌಡ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್' ಜಾತಿ ?

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಳ್ಳಲಾಗುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 ರ ಸಲುವಾಗಿ ಕರ್ನಾಟಕ ರಾಜ್ಯದಲ್ಲಿ ಗುರುತಿಸಿರುವ ಜಾತಿ - ಉಪಜಾತಿಗಳ ಪಟ್ಟಿಯಲ್ಲಿ ಮಡಿವಾಳ ಕ್ರಿಶ್ಚಿಯನ್, ಬಂಟ ಕ್ರಿಶ್ಚಿಯನ್, ಬಿಲ್ಲವ ಕ್ರಿಶ್ಚಿಯನ್, ಗೌಡ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್ ಎಂದು ಹಲವು ಹೆಸರು ಬಿಡುಗಡೆ ಮಾಡಿದ್ದಾರೆ. ಯಾವುದು ಈ ಹೊಸ ಜಾತಿಗಳು ?

ಈಗ ಶೈಕ್ಷಣಿಕ ದಾಖಲೆಗಳಿಗೆ ಜಾತಿ ಹೆಸರು ನಮೂದಿಸುವಾಗ ಕ್ರಿಶ್ಚಿಯನ್ ಎಂದು ಬರೆದರೂ ಸಾಕು. ಕ್ರಿಶ್ಚಿಯನ್ ನಲ್ಲಿ ಯಾವ ಜಾತಿ ಎಂದು ಬರೆಯಬೇಕಾಗಿಲ್ಲ. ಹಾಗಿರುವಾಗ ಇದೊಂದು ಜಾತಿ ಯಾಕೆ ಸೃಷ್ಟಿ ಮಾಡಿದ್ದೀರಿ ಎಂದು ಭರತ್ ಶೆಟ್ಟಿ ಪ್ರಶ್ನೆ ಮಾಡಿದ್ದಾರೆ.

ಇದಕ್ಕೆ ಉತ್ತರಿಸಲು ಡಿಸಿ ತೊದಲಿದ್ದಾರೆ. ಈ ನಡುವೆ ಮಧ್ಯಪ್ರವೇಶಿಸಿದ ಸ್ಪೀಕರ್ ಯುಟಿ ಖಾದರ್, ಈ ಮೊದಲು ಯಾವ ಜಾತಿಯಲ್ಲಿದ್ದರು, ಈಗ ಯಾವ ಜಾತಿ ಎಂದು ತಿಳಿಯಲು ಈ ರೀತಿ ಮಾಡಿದ್ದಾರಷ್ಟೇ ಎಂದು ಸಮಜಾಯಿಷಿ ಕೊಡುವ ಪ್ರಯತ್ನ ಮಾಡಿದ್ದಾರೆ. ಭರತ್ ಶೆಟ್ಟಿಗೆ ಇತರರೂ ಬೆಂಬಲ ನೀಡಿದ್ದಾರೆ. ಈ ವೈರಲ್ ವಿಡಿಯೋ ಇಲ್ಲಿದೆ ನೋಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಜಿ ಪ್ರಧಾನಿ ಎಚ್ ದೇವೇಗೌಡರ ಆರೋಗ್ಯದ ಬಗ್ಗೆ ಕುಮಾರಸ್ವಾಮಿಯಿಂದ ಬಿಗ್‌ ಅಪ್ಡೇಟ್‌

17 ಮಕ್ಕಳು ಸಾವು ಪ್ರಕರಣ: ಕೆಮ್ಮಿನ ಮೂರು ಸಿರಪ್ ತಯಾರಿಕೆಗೆ ಬ್ರೇಕ್‌

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

ಶೂ ಎಸೆದ ಪ್ರಕರಣ: ನನ್ನ ಸಹೋದರನಿಗೆ ತುಂಬಾನೇ ನೋವಾಗಿದೆ ಎಂದ ಸಿಜೆಐ

ಮೈಸೂರು ರೇಪ್ ಆಂಡ್ ಮರ್ಡರ್ ಕೇಸ್‌: ಆರೋಪಿಯ ಗುರುತು ಕೊನೆಗೂ ಪತ್ತೆ

ಮುಂದಿನ ಸುದ್ದಿ
Show comments