Publish Date: Sat, 30 Sep 2023 (14:04 IST)
Updated Date: Sat, 30 Sep 2023 (13:07 IST)
ಮೇಕೆಗಳನ್ನು ನುಂಗುವುದನ್ನು ಬಿಟ್ಟರೆ ಇವರು ಮೇಕೆದಾಟದಲ್ಲಿ ಏನೂ ಇಟ್ಟಿಲ್ಲ ಎಂದು ಮಾಜಿ ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ವ್ಯಂಗ್ಯವಾಡಿದ್ದಾರೆ.ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ನೀರು ಬಿಡಲ್ಲ ಎಂದು ಹೇಳಿ ನೀರು ಬಿಟ್ಟಿದ್ದಾರೆ. ಇವರಿಗೆ ಮಾನ ಮರ್ಯಾದೆ ಇದೆಯಾ, ರೈತರ ಹಿತ ಕಾಪಾಡಲು ಸಾಧ್ಯವಾಗದ ಕಾಂಗ್ರೆಸ್ನವರಿಗೆ ನಾಚಿಕೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.ಕೃಷಿ ಇಲಾಖೆಗೆ ಶೇ.50ರಷ್ಟು ಬಜೆಟ್ ಇಟ್ಟಿದ್ದಾರೆ. ಇವರು ಮನುಷ್ಯರಾ. ನಾವಿದ್ದಾಗ ಯಾವುದೇ ಸಂಕಷ್ಟ ಇರಲಿಲ್ಲ. ಲೂಟಿ ಮಾಡುವಲ್ಲಿ ಇವರು ಮುಂಚೂಣಿಯಲ್ಲಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಅಶ್ವತ್ಥನಾರಾಯಣ ವಾಗ್ದಾಳಿ ನಡೆಸಿದ್ದಾರೆ.