Select Your Language

Notifications

webdunia
webdunia
webdunia
webdunia

ಖ್ಯಾತ ಬಂಡಾಯ ಸಾಹಿತಿ ಡಾ.ಚೆನ್ನಣ್ಣ ವಾಲೀಕಾರ್ ನಿಧನ

ಖ್ಯಾತ ಬಂಡಾಯ ಸಾಹಿತಿ ಡಾ.ಚೆನ್ನಣ್ಣ ವಾಲೀಕಾರ್ ನಿಧನ
ಕಲಬುರಗಿ , ಸೋಮವಾರ, 25 ನವೆಂಬರ್ 2019 (11:40 IST)
ಕಲಬುರಗಿ : ಖ್ಯಾತ ಬಂಡಾಯ ಸಾಹಿತಿ ಡಾ.ಚೆನ್ನಣ್ಣ ವಾಲೀಕಾರ್ (78) ಭಾನುವಾರ ರಾತ್ರಿ 10 ಗಂಟೆಗೆ ನಿಧನರಾಗಿದ್ದಾರೆ.



ಕಳೆದ ದಿನಗಳಿಂದ ಕಾಮಾಲೆ ಹಾಗೂ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರು ಬದುಕುವುದು ಅಸಾಧ್ಯವಾದ ಹಿನ್ನಲೆಯಲ್ಲಿ ಅವರನ್ನು ಮನೆಗೆ ಕರೆತರಲಾಗಿತ್ತು. ಆದರೆ ಅವರ ಆರೋಗ್ಯ ಸ್ಥಿತಿ ಭಾನುವಾರ ರಾತ್ರಿ ಗಂಭೀರವಾದ ಹಿನ್ನಲೆಯಲ್ಲಿ ಸರಿಸುಮಾರು 10 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.


ಇಂದು ಬೆಳಿಗ್ಗೆ 11 ರಿಂದ  12ಗಂಟೆಯವರೆಗೆ ಕಲಬುರಗಿಯ ಹಿಂದಿ ಪ್ರಚಾರ ಸಭೆ ಆವರಣದಲ್ಲಿ ಅವರ ಮೃತದೇಹವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ಇಂದು ಮಧ್ಯಾಹ್ನ 3 ಗಂಟೆಗೆ ಅವರ ಸ್ವಗ್ರಾಮ ಚಿತ್ತಾಪುರದ ಶಂಕರವಾಡಿ ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.


Share this Story:

Follow Webdunia kannada

ಮುಂದಿನ ಸುದ್ದಿ

ವರದಕ್ಷಿಣೆ ನೀಡಲಿಲ್ಲವೆಂದು ಪತ್ನಿಗೆ ಪತಿ ಮಾಡಿದ್ದೇನು ಗೊತ್ತಾ?