ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತರನ್ನು ಭೇಟಿ ಮಾಡಿದ ಮಾಜಿ ಸಚಿವ ಡಾ. ಸಿಎನ್ ಅಶ್ವತ್ಥನಾರಾಯಣ್

Krishnaveni K
ಶುಕ್ರವಾರ, 12 ಏಪ್ರಿಲ್ 2024 (13:43 IST)
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಪ್ರಚಾರಕ್ಕೆ ಹೋಗಿದ್ದಾಗ ಹಲ್ಲೆಗೊಳಗಾಗಿದ್ದ ಬಿಜೆಪಿ ಕಾರ್ಯಕರ್ತರನ್ನು ಇಂದು ಮಾಜಿ ಸಚಿವ ಡಾ. ಸಿಎನ್ ಅಶ್ವತ್ಥನಾರಾಯಣ್ ಭೇಟಿ ಮಾಡಿದ್ದಾರೆ.

ಕುಣಿಗಲ್ ನಲ್ಲಿ ನಿನ್ನೆ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಘಟನೆಯನ್ನು ಖಂಡಿಸಿದ್ದ ಬಿಜೆಪಿ ಇದೆಲ್ಲಾ ಕಾಂಗ್ರೆಸ್ ನವರ ಕೃತ್ಯ ಎಂದು ಆರೋಪಿಸಿತ್ತು. ಹಲ್ಲೆಗೊಳಗಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಕಾರ್ಯಕರ್ತರನ್ನು ಭೇಟಿ ಮಾಡಿದ ಅಶ್ವತ್ಥನಾರಾಯಣ ಸಂತ್ರಸ್ತರಿಗೆ ಸಾಂತ್ವನ ಹೇಳಿದ್ದಾರೆ.

ಬಳಿಕ ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ‘ಸಾರ್ವಜನಿಕರು ಕಾರ್ಯಕರ್ತರು ಯಾರೂ ಹೆದದರಬೇಕಿಲ್ಲ. ನಿಮ್ಮನ್ನು ಸುರಕ್ಷಿತವಾಗಿರಿಸಲು ನಾವು ಯಾವತ್ತೂ ನಿಮ್ಮ ಜೊತೆಗಿರುತ್ತೇವೆ. ಚಾಕು ತಂದು ಚುಚ್ಚಿರುವುದು ಕ್ಯಾಮರಾದಲ್ಲೇ ಗೊತ್ತಾಗುತ್ತಿದೆ. ಆದರೆ ಬೆದರಿಕೆ ಎಂದು ಸಣ್ಣ ಕೇಸ್ ಹಾಕಿದ್ದಾರೆ. ಕಣ್ಮುಂದೇ ಸಾಕ್ಷಿಯಿದ್ದರೂ ಸರಿಯಾದ ಕ್ರಮ ಕೈಗೊಳ‍್ಳಲು ಪೊಲೀಸರು ವಿಫಲರಾಗಿದ್ದಾರೆ. ಪೊಲೀಸರು ಕಾಂಗ್ರೆಸ್ ನ ಕೈಗೊಂಬೆಯಾಗಿದ್ದಾರೆ’ ಎಂದಿದ್ದಾರೆ.

‘ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುವುದು, ತಡೆಯುವುದು, ಅಧಿಕಾರ ದುರ್ಬಳಕೆ ಮಾಡುವುದು ಎಲ್ಲವನ್ನೂ ಕಾಂಗ್ರೆಸ್ ಮಾಡುತ್ತಿದೆ. ಸಂತ್ರಸ್ತರು ಕಂಪ್ಲೇಂಟ್ ಕೊಡಲೂ ಹಿಂದೇಟು ಹಾಕುವಂತಹ ಪರಿಸ್ಥಿತಿಯಾಗಿದೆ. ನೆಪ ಮಾತ್ರಕ್ಕೆ ಕಂಪ್ಲೇಂಟ್ ಹಾಕಿ ಆರೋಪಿಗಳಿಗೆ ಕುಮ್ಮಕ್ಕು ಕೊಡಲಾಗುತ್ತಿದೆ. ಅಧಿಕಾರಿಗಳು ನಮ್ಮ ಕಾರ್ಯಕರ್ತರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಚುನಾವಣಾ ಆಯೋಗಕ್ಕೆ ದೂರು ಕೊಡಲಿದ್ದೇವೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಮುಂದಿನ ಸುದ್ದಿ
Show comments