Publish Date: Mon, 20 Apr 2026 (14:40 IST)
Updated Date: Mon, 20 Apr 2026 (14:46 IST)
ಬೆಂಗಳೂರು: ರಾಜ್ಯದ ಉದ್ಯೋಗಾಂಕ್ಷಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಮಲ್ಲೇಶ್ವರದಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕರಾದ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಹೇಳಿದರು.
ಮಲ್ಲೇಶ್ವರದ ಎಸ್.ಎಚ್.ವಿ.ಎನ್.ಎಂ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ 'ಯುವೋತ್ಸವ' ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಪಡೆಯಲು ಹಾಗೂ ಅವರಿಗೆ ನೆರವಾಗಲು ಇಂತಹ ಮೇಳಗಳು ಸಹಕಾರಿಯಾಗಿವೆ. ವಿದ್ಯಾರ್ಥಿಗಳಿಗೆ ಕರಿಯರ್ ಗೈಡೆನ್ಸ್ ನೀಡಲಾಗುವುದು. ನಮ್ಮ ಈ ಕಾರ್ಯಕ್ರಮಕ್ಕೆ ಹಲವಾರು ಸಂಸ್ಥೆಗಳು ಕೈ ಜೋಡಿಸಿವೆ ಎಂದು ಹೇಳಿದರು.
ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ದೊರೆತರೆ ಸದೃಢ ಸಮಾಜ ಕಟ್ಟಲು ಸಾಧ್ಯವಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ಉದ್ಯೋಗ ಅವಕಾಶ ಸೃಷ್ಟಿಸಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದಾರೆ. ಇದರಲ್ಲಿ ಲಕ್ಷಾಂತರ ಉದ್ಯೋಗ ಸೃಷ್ಟಿ ಆಗಿದೆ. ಬಸವೇಶ್ವರರ ಜಯಂತಿ ದಿನವೇ ಈ ಮೇಳ ಆಯೋಜಿಸಲಾಗಿದೆ. ಬಸವಣ್ಣನವರು ಕಾಯಕವೇ ಕೈಲಾಸ ಎಂದು ಹೇಳಿದ್ದರು. ಅವರು ಹೇಳಿದಂತೆ ಸಮಾನತೆಯ ಸಮಾಜ ಕಟ್ಟಲು ಬದ್ಧರಾಗೋಣ ಎಂದರು.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ