ಡಾ ಸಿಎನ್ ಮಂಜುನಾಥ್ ಲೋಕಸಭೆ ಸ್ಪರ್ಧೆ ಖಚಿತ: ಘೋಷಣೆಯಷ್ಟೇ ಬಾಕಿ

Krishnaveni K
ಬುಧವಾರ, 6 ಮಾರ್ಚ್ 2024 (09:20 IST)
ಬೆಂಗಳೂರು: ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ, ಎಷ್ಟೋ ಬಡವರ ಪಾಲಿಗೆ ಬೆಳಕಾಗಿದ್ದ ಡಾ ಸಿಎನ್ ಮಂಜುನಾಥ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಅಥವಾ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಡಾ ಸಿಎನ್‍ ಮಂಜುನಾಥ್ ಸ್ಪರ್ಧಿಸಲಿದ್ದಾರೆ ಎಂದು ಹಲವು ಸಮಯದಿಂದ ಮಾತುಗಳು ಕೇಳಿಬರುತ್ತಲೇ ಇತ್ತು. ಜೆಡಿಎಸ್ ನಿಂದ ಅವರು ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳಿತ್ತು. ಅದೀಗ ನಿಜವಾಗುವ ಲಕ್ಷಣ ಕಾಣುತ್ತಿದೆ.

ಮಂಜುನಾಥ್ ಸ್ಪರ್ಧೆ ಬಗ್ಗೆ ಜೆಡಿಎಸ್ ನಾಯಕ ಕುಮಾರಸ್ವಾಮಿ ಮನೆಯಲ್ಲಿ ಚರ್ಚೆಯಾಗಿ ಎಂದು ತಿಳಿದುಬಂದಿದೆ. ಮೈತ್ರಿ ಪಕ್ಷ ಬಿಜೆಪಿಯೂ ಮಂಜುನಾಥ್ ಸ್ಪರ್ಧೆಗೆ ಹಸಿರು ನಿಶಾನೆ ತೋರಿದೆ. ಕ್ಲೀನ್ ಚಿಟ್ ಇರುವ, ಸಮಾಜದಲ್ಲಿ ಗೌರವವಿರುವ ವ್ಯಕ್ತಿ ಚುನಾವಣೆಗೆ ಸ್ಪರ್ಧಿಸಿದರೆ ಜನ ಖಂಡಿತಾ ಬೆಂಬಲಿಸುತ್ತಾರೆ.

ಮಂಜುನಾಥ್ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಅಳಿಯ. ಆದರೆ ತಮ್ಮ ವೃತ್ತಿ ಜೀವನದಲ್ಲಿ ಒಮ್ಮೆಯೂ ದೇವೇಗೌಡರ ಪ್ರಭಾವ ಬಳಸದೇ ತಮ್ಮ ಸ್ವಂತ ವ್ಯಕ್ತಿತ್ವ, ಕೆಲಸದಿಂದಾಗಿ ಜನ ಮನಗೆದ್ದವರು. ಅವರು ಯಾವ ಪಕ್ಷದಿಂದ ಸ್ಪರ್ಧಿಸಿದರೂ ಜನ ಬೆಂಬಲಿಸಬಹುದು ಎಂಬ ವಿಶ್ವಾಸವಿದೆ. ಸ್ವತಃ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಕೂಡಾ ಮಂಜುನಾಥ್ ಸ್ಪರ್ಧೆಗೆ ಒಲವು ಹೊಂದಿದ್ದಾರೆ. ಹೀಗಾಗಿ ಡಾ ಮಂಜುನಾತ್ ಸ್ಪರ್ಧೆ ಬಹುತೇಕ ಖಚಿತವಾಗಿದ್ದು, ಈಗ ಅಧಿಕೃತ ಘೋಷಣೆಯೊಂದೇ ಬಾಕಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿದ್ದು ತುಟಿಗೆ ಗಾಯ: ಹೊಲಿಗೆ ಹಾಕಲು ಅರಿವಳಿಕೆ ನೀಡಿದ ಬೆನ್ನಲ್ಲೇ 8ತಿಂಗಳ ಮಗು ಸಾವು

ಹಾಲಿವುಡ್ ಆಕ್ಷನ್ ಮೂವಿ ಮೀರಿಸುವಂತಿದೆ ಈ ಖತರ್ನಾಕ್ ಕಳ್ಳರ ಎಟಿಎಂ ಕಳ್ಳತನದ ಟ್ರಿಕ್ video

ಸ್ಕೂಲ್ ಬಸ್‌ನಿಂದ ಇಳಿದು ರಸ್ತೆ ದಾಟಲು ಹೋದ ಬಾಲಕಿಗೆ ಡಿಕ್ಕಿ ಹೊಡೆದ ಸ್ಕೂಟರ್‌, Video

ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಹಿಂಬದಿ ಸೀಟಿಗೆ ಬರುವಂತೆ ಸನ್ನೆ, ಬಸ್ ಕಂಡಕ್ಟರ್ ಅರೆಸ್ಟ್‌

ತಿರುಪತಿಗೆ ಕಾಲ್ನಡಿಗೆಯಲ್ಲಿ ಬೆಟ್ಟ ಹತ್ತುತ್ತಿದ್ದವರಿಗೆ ಶಾಕ್: ಆ ರಾತ್ರಿ ಅಲ್ಲಿ ನಡೆದಿದ್ದೇನು Video

ಮುಂದಿನ ಸುದ್ದಿ
Show comments