ಸಂಸದರಾದರೂ ವೈದ್ಯ ವೃತ್ತಿ ಮರೆಯದ ಡಾ ಮಂಜುನಾಥ್: ಉಚಿತ ಚಿಕಿತ್ಸೆ ಮೂಲಕ ರೋಗಿಯ ಪ್ರಾಣ ಉಳಿಸಿದರು

Krishnaveni K
ಶುಕ್ರವಾರ, 23 ಆಗಸ್ಟ್ 2024 (14:53 IST)
ಬೆಂಗಳೂರು: ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ ಸಿಎನ್ ಮಂಜುನಾಥ್ ಈಗ ತಮ್ಮ ಹುದ್ದೆಯಿಂದ ನಿವೃತ್ತರಾಗಿದ್ದು, ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಆದರೆ ಸಂಸದರಾದರೂ ಮಂಜುನಾಥ್ ತಮ್ಮ ವೈದ್ಯ ವೃತ್ತಿ ಮರೆತಿಲ್ಲ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಡಾ ಮಂಜುನಾಥ್ ಭರ್ಜರಿಯಾಗಿ ಗೆದ್ದು ಈಗ ಸಂಸದರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಹಾಗಿದ್ದರೂ ಅವರು ತಮ್ಮ ವೈದ್ಯ ವೃತ್ತಿಯನ್ನು ಮರೆತಿಲ್ಲ ಈಗಲೂ ವಾರದಲ್ಲಿ ಕೆಲವು ಗಂಟೆಗಳ ಕಾಲ ಉಚಿತ ಚಿಕಿತ್ಸೆ ನೀಡುವ ಮೂಲಕ ರೋಗಿಗಳಿಗೆ ನೆರವಾಗುತ್ತಿದ್ದಾರೆ.

ಇದೀಗ ಡಾ ಸಿಎನ್ ಮಂಜುನಾಥ್ 54 ವರ್ಷದ ಹೃದಯದ ರಕ್ತನಾಳಗಳು ಬ್ಲಾಕ್ ಆಗಿದ್ದ ವ್ಯಕ್ತಿಗೆ ಆಂಜಿಯೋಪ್ಲಾಸ್ಟಿ ಮಾಡುವ ಮೂಲಕ ಅವರ ಜೀವ ಉಳಿಸುವ ಕೆಲಸ ಮಾಡಿದ್ದಾರೆ. ಈ ವ್ಯಕ್ತಿಗೆ ಶೇ.90 ರಷ್ಟು ಹೃದಯದ ರಕ್ತನಾಳಗಳು ಬ್ಲಾಕ್ ಆಗಿತ್ತು. ಇದರಿಂದಾಗಿ ಆತನ ಜೀವಕ್ಕೆ ಸಂಚಕಾರ ಎದುರಾಗಿತ್ತು. ಆದರೆ ಡಾ ಮಂಜುನಾಥ್ ಯಶಸ್ವಿಯಾಗಿ ಆಂಜಿಯೋಪ್ಲಾಸ್ಟಿ ನಡೆಸಿ ರೋಗಿಯ ಜೀವ ಉಳಿಸಿದ್ದಾರೆ.

ಸಂಸದರಾದ ಬಳಿಕವೂ ತಮ್ಮ ಮೆಚ್ಚಿನ ವೈದ್ಯ ವೃತ್ತಿಯನ್ನು ಅವರು ಬಿಟ್ಟುಕೊಟ್ಟಿಲ್ಲ. ಈಗಲೂ ವಾರದಲ್ಲಿ ಎರಡು ದಿನ ಕೆಲವು ಗಂಟೆ ಬಡ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುತ್ತಿದ್ದಾರಂತೆ. ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿದ್ದಾಗ ಎಷ್ಟೋ ಜನರ ಜೀವ ಉಳಿಸಿ ಬಡವರ ಪಾಲಿಗೆ ದೇವರಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Big Breaking: ಆಲ್ ಫಲಾಹ್ ಗ್ರೂಪ್‌ನ ಅಧ್ಯಕ್ಷ 13ದಿನ ಇಡಿ ಕಸ್ಟಡಿಗೆ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

ಮುಂದಿನ ಸುದ್ದಿ
Show comments