Webdunia - Bharat's app for daily news and videos

Install App

ವೈದ್ಯರಾಗಿ ಹೃದಯ ಗೆದ್ದ ಡಾ.ಮಂಜುನಾಥ್ ಈಗ ರಾಜಕೀಯಕ್ಕೆ ಎಂಟ್ರಿ ಸಾಧ್ಯತೆ

Krishnaveni K
ಭಾನುವಾರ, 4 ಫೆಬ್ರವರಿ 2024 (09:52 IST)
Photo Courtesy: Twitter
ಬೆಂಗಳೂರು: ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಲಕ್ಷಾಂತರ ಜನರಿಗೆ ಜೀವನ ಕೊಟ್ಟ ವೈದ್ಯ ಡಾ. ಮುಂಜುನಾಥ್ ಈಗ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್ ತನ್ನ ಪ್ರಾಬಲ್ಯವಿರುವ ಒಟ್ಟು ಐದು ಕ್ಷೇತ್ರಗಳಲ್ಲಿ ಪ್ರಬಲ ಸ್ಪರ್ಧಿಗಳನ್ನೇ ಕಣಕ್ಕಿಳಿಸಲು ಚಿಂತನೆ ನಡೆಸಿದೆ. ಅದರಂತೆ ಮಂಡ್ಯ ಅಥವಾ ಗ್ರಾಮಾಂತರ ಕ್ಷೇತ್ರದಿಂದ ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ. ಮಂಜುನಾಥ್ ಅವರನ್ನು ಕಣಕ್ಕಿಳಿಸಲು ಯೋಜನೆ ರೂಪಿಸಿದೆ. ಆದರೆ ಮೊನ್ನೆಯಷ್ಟೇ ತಮ್ಮ ಸೇವೆಯಿಂದ ನಿವೃತ್ತರಾದ ಮಂಜುನಾಥ್ ರಾಜಕೀಯಕ್ಕೆ ಬರಲು ಸಮ್ಮಿತಿ ನೀಡುತ್ತಾರಾ ಕಾದು ನೋಡಬೇಕಿದೆ.

ದೇವೇಗೌಡರ ಅಳಿಯ ಡಾ. ಮಂಜುನಾಥ್
ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ವರ್ಷಗಳ ದಕ್ಷ ಆಡಳಿತ ನಡೆಸಿ, ಆಸ್ಪತ್ರೆಯ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾಗಿದ್ದಲ್ಲದೇ ಎಷ್ಟೋ ರೋಗಿಗಳ ಪಾಲಿಗೆ ದೇವರಾಗಿದ್ದವರು ಮಂಜುನಾಥ್. ಅವರು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಅಳಿಯ. ಆದರೆ ಇದುವರೆಗೆ ಮಂಜುನಾಥ್ ರಾಜಕೀಯದಲ್ಲಿ ತೊಡಗಿಸಿಕೊಂಡವರಲ್ಲ. ಆದರೆ ವೈದ್ಯರಾಗಿ ಜನಸೇವೆ ಮಾಡಿ ಎಲ್ಲರ ಮೆಚ್ಚುಗೆ ಗಳಿಸಿರುವ ಮಂಜುನಾಥ್ ರನ್ನು ಕಣಕ್ಕಿಳಿಸಿದರೆ ಗೆಲ್ಲಬಹುದು ಎಂಬುದು ಜೆಡಿಎಸ್ ಲೆಕ್ಕಾಚಾರ. ಹೀಗಾಗಿ ಅವರಿಗೆ ಮಂಡ್ಯ ಅಥವಾ ಬೆಂಗಳೂರು ಗ್ರಾಮಾಂತರ ಟಿಕೆಟ್ ಕೊಡಿಸುವ ಇರಾದೆ ಪಕ್ಷಕ್ಕಿದೆ.

ಆದರೆ ಇಷ್ಟು ದಿನ ರಾಜಕೀಯದಿಂದ ದೂರವೇ ಇದ್ದ ಜಯದೇವ್ ಈಗ ರಾಜಕೀಯಕ್ಕೆ ಬರಲು ಒಪ್ಪಿಗೆ ನೀಡುತ್ತಾರೋ ಗೊತ್ತಿಲ್ಲ. ಆದರೆ ಜೆಡಿಎಸ್ ಈ ನಿಟ್ಟಿನಲ್ಲಿ ಪ್ರಯತ್ನವಂತೂ ನಡೆಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಸರಲ್ಲಿ ಕಲ್ಲು ಹುಡುಕುವ ಕಾಂಗ್ರೆಸ್ ಪಕ್ಷ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

Bengaluru: ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಅರೆಸ್ಟ್‌

Shashi Tharoor: ಮೋದಿಯನ್ನು ಹೊಗಳಿದ ಕೈ ಸಂಸದ ಶಶಿ ತರೂರ್ ಗೆ ಸಿಕ್ತು ಭರ್ಜರಿ ಬಹುಮಾನ

ಪಾಕಿಸ್ತಾನದೊಂದಿಗೆ ಯುದ್ಧ ಬೇಡ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಹೇಳೋದೇ ಬೇರೆ

ಆಪರೇಷನ್ ಸಿಂಧೂರ್ ಬಗ್ಗೆ ಅಪಪ್ರಚಾರ ಮಾಡಲು ಕಾಂಗ್ರೆಸ್ ನಾಯಕರಿಗೆ ಟಾಸ್ಕ್

ಮುಂದಿನ ಸುದ್ದಿ
Show comments