Webdunia - Bharat's app for daily news and videos

Install App

ಕಾಂಗ್ರೆಸ್ ಗೆ ಖಡಕ್ ಕೌಂಟರ್ ಕೊಟ್ಟ ದೇವೇಗೌಡರ ಮಗಳು ಅನಸೂಯಾ ಮಂಜುನಾಥ್

Krishnaveni K
ಭಾನುವಾರ, 31 ಮಾರ್ಚ್ 2024 (09:34 IST)
Photo Courtesy: facebook
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಹೃದಯ ತಜ್ಞ ಡಾ. ಸಿಎನ್ ಮಂಜುನಾಥ್ ಪರವಾಗಿ ಅವರ ಪತ್ನಿ ಅನಸೂಯಾ ಎದುರಾಳಿಗಳಿಗೆ ಖಡಕ್ ಟಾಂಗ್ ಕೊಟ್ಟಿದ್ದಾರೆ.

ಅನಸೂಯಾ ಮಂಜುನಾಥ್ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಮಗಳು. ಹೀಗಾಗಿ ರಾಜಕಾರಣ ಅವರ ರಕ್ತದಲ್ಲೇ ಇದೆ. ಇದೀಗ ಗಂಡನ ಪರವಾಗಿ ಪ್ರಚಾರಕ್ಕೆ ನಿಂತಿರುವ ಅನಸೂಯಾ ಮಂಜುನಾಥ್ ಎದುರಾಳಿ ಪಕ್ಷ ಕಾಂಗ್ರೆಸ್ ಗೆ ಸಖತ್ ಕೌಂಟರ್ ಕೊಟ್ಟಿದ್ದಾರೆ.

ಡಾ ಮಂಜುನಾಥ್ ಗೆ ಎದುರಾಳಿಯಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಡಿಕೆ  ಸುರೇಶ್ ಸ್ಪರ್ಧಿಸುತ್ತಿದ್ದಾರೆ. ಅವರು ಈಗಾಗಲೇ ಈ ಕ್ಷೇತ್ರದ ಸಂಸದ. ಹೀಗಾಗಿ ಇಲ್ಲಿ ಗೆಲ್ಲುವುದು ಅವರಿಗೆ ಪ್ರತಿಷ್ಠೆಯ ವಿಚಾರವಾಗಿದೆ. ಆದರೆ ಮಂಜುನಾಥ್ ರಂತಹ ಕಳಂಕರಹಿತ, ಜನಪ್ರಿಯ ವ್ಯಕ್ತಿ ಸ್ಪರ್ಧಿಸುತ್ತಿರುವುದು ಕಾಂಗ್ರೆಸ್ ಗೆ ನುಂಗಲಾರದ ತುತ್ತಾಗಿದೆ. ಈ ಕಾರಣಕ್ಕೆ ಮಾತಿನ ಚಕಮಕಿಗಳು ಜೋರಾಗಿಯೇ ನಡೆಯುತ್ತಿದೆ.

ಇದೀಗ ಗಂಡನ ಪರವಾಗಿ ಮಾತನಾಡಿರುವ ಅನಸೂಯಾ ‘ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮತದಾರರು ಕೈ ಹಿಡಿಯುತ್ತಾರೆ ಎಂದು ಗೊತ್ತಿದ್ದೇ ಅಮಿತ್ ಶಾ ಅವರು ನನ್ನ ಗಂಡನಿಗೆ ಟಿಕೆಟ್ ನೀಡಿದ್ದಾರೆ. ಈ ಬಾರಿ ಕ್ಷೇತ್ರದಲ್ಲಿ ವಿಭಿನ್ನವಾದ ವಾತಾವರಣವಿದೆ.  ಕಾಂಗ್ರೆಸ್ ವಿರುದ್ಧ ಬಿಜೆಪಿ-ಜೆಡಿಎಸ್ ಎರಡೂ ಪಕ್ಷಗಳು ಹೋರಾಡುತ್ತಿವೆ. ಬಿಜೆಪಿಯಿಂದ ಅಮಿತ್ ಶಾ ಇದ್ದರೆ ಜೆಡಿಎಸ್ ನಿಂದ ಕುಮಾರಣ್ಣ ಇದ್ದಾರೆ. ಹಿರಿಯರಾದ  ದೇವೇಗೌಡರ ಸಾಧನೆ ಇದೆ. ಕಳೆದ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಜೆಡಿಎಸ್ ಸಹಾಯ ಸಿಕ್ಕಿತ್ತು ಎನ್ನುವುದನ್ನು ಅವರು ಮರೆಯಬಾರದು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments