ಡಿಕೆ ಸುರೇಶ್ ವಿರುದ್ಧ 40 ಸಾವಿರ ಮತಗಳಿಂದ ಡಾ ಸಿಎನ್ ಮಂಜುನಾಥ್ ಗೆಲ್ಲುತ್ತಾರಂತೆ

Krishnaveni K
ಶುಕ್ರವಾರ, 31 ಮೇ 2024 (12:39 IST)
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ನ ಡಿಕೆ ಸುರೇಶ್ ಮತ್ತು ಬಿಜೆಪಿಯಿಂದ ಹೃದ್ರೋಗ ತಜ್ಞ, ಸಮಾಜ ಸೇವಕ ಡಾ ಸಿಎನ್ ಮುಂಜುನಾಥ್ ನಡುವೆ ತೀವ್ರ ಪೈಪೋಟಿಯಿದೆ.

ಈ ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆ ಎಂದು ಇಡೀ ಕರ್ನಾಟಕವೇ ಎದಿರು ನೋಡುತ್ತಿದೆ. ಯಾಕೆಂದರೆ ಡಿಕೆ ಸುರೇಶ್ ಕಾಂಗ್ರೆಸ್ ನ ಪ್ರಮುಖ ನಾಯಕ. ಕಳೆದ ಬಾರಿ ಚುನಾವಣೆಯಲ್ಲಿ ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಸೋತಿದ್ದಾಗ ಕರ್ನಾಟಕದಿಂದ ಏಕಾಂಗಿಯಾಗಿ ಕಾಂಗ್ರೆಸ್ ನಿಂದ ಗೆದ್ದವರು ಡಿಕೆ ಸುರೇಶ್.

ಅಷ್ಟೇ ಅಲ್ಲದೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಹೋದರ. ಹೀಗಾಗಿ ಕಾಂಗ್ರೆಸ್ ಗೆ ಇದು ಪ್ರತಿಷ್ಠೆಯ ಕಣ. ಇವರ ವಿರುದ್ಧ ಇದೇ ಮೊದಲ ಬಾರಿಗೆ ರಾಜಕೀಯ ಪ್ರವೇಶಿಸಿರುವ ಹೃದ್ರೋಗ ತಜ್ಞ, ಸಮಾಜ ಸೇವಕ ಡಾ ಸಿಎನ್ ಮಂಜುನಾಥ್ ಸ್ಪರ್ಧಿಸಿದ್ದಾರೆ.

ಕಳಂಕ ರಹಿತರಾಗಿರುವ ಮಂಜುನಾಥ್ ಗೆ ಸಮಾಜದಲ್ಲಿ ಒಳ್ಳೆಯ ಹೆಸರಿದೆ. ಹೀಗಾಗಿ ಇಬ್ಬರ ನಡುವೆ ಯಾರು ಗೆಲ್ಲುತ್ತಾರೆ ಎಂಬುದು ಕುತೂಹಲವಾಗಿದೆ. ಈ ನಡುವೆ ಸೋಷಿಯಲ್ ಮೀಡಿಯಾ ಸಮೀಕ್ಷೆಗಳು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸುರೇಶ್ ವಿರುದ್ಧ ಮಂಜುನಾಥ್ 40 ಸಾವಿರ ಮತಗಳಿಂದ ಗೆಲ್ಲುತ್ತಾರೆ ಎಂಬ ಸುದ್ದಿ ಹರಿದಾಡಿದೆ. ಜೂನ್ 4 ಫಲಿತಾಂಶ ದಿನಕ್ಕೆ ಕ್ಷಣಗಣನೆ ಶುರುವಾಗಿದ್ದು, ಆ ದಿನ ಎಲ್ಲಾ ಕುತೂಹಲಕ್ಕೆ ತೆರೆ ಬೀಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments