ಡಾ ಕೃತಿಕಾ ರೆಡ್ಡಿ ಕೇಸ್: ಅಬ್ಬಾ.. ಡಾ ಮಹೇಂದ್ರ ರೆಡ್ಡಿಗಿತ್ತಾ ಇಂಥಾ ಖಯಾಲಿ

Krishnaveni K
ಮಂಗಳವಾರ, 21 ಅಕ್ಟೋಬರ್ 2025 (09:52 IST)
ಬೆಂಗಳೂರು: ಡಾ ಕೃತಿಕಾ ರೆಡ್ಡಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ದಿನಕ್ಕೊಂದು ವಿಚಾರಗಳು ತಿಳಿದುಬರುತ್ತಿದೆ. ಆರೋಪಿ ಪತಿ ಡಾ ಮಹೇಂದ್ರ ರೆಡ್ಡಿಯ ಮತ್ತೊಂದು ಕರಾಳ ಮುಖ ಬಯಲಾಗಿದೆ.

ಪತ್ನಿಗೆ ಪ್ರೊಪೊಫೋಲ್ ಎನ್ನುವ ಅನಸ್ತೇಷಿಯಾ ಓವರ್ ಡೋಸ್ ನೀಡಿ ಮಹೇಂದ್ರ ರೆಡ್ಡಿ ಕೊಲೆ ಮಾಡಿದ್ದು ಇದೀಗ ತನಿಖೆಯಲ್ಲಿ ಬಯಲಾಗಿದೆ. ಆತನೇ ಇದೀಗ ಮೆಡಿಕಲ್ ಶಾಪ್ ಒಂದರಿಂದ ನಾನು ಸರ್ಜನ್ ಎಂದು ಹೇಳಿಕೊಂಡು ಅನಸ್ತೇಷಿಯಾ ಖರೀದಿ ಮಾಡಿದ್ದ ಎಂದು ಆತನೇ ಒಪ್ಪಿಕೊಂಡಿದ್ದಾನೆ.

ಏಪ್ರಿಲ್ ನಲ್ಲಿ ನಡೆದಿದ್ದ ಕೃತ್ಯ ಇದೀಗ ಎಫ್ಎಸ್ಎಲ್ ವರದಿಯಿಂದ ಬಹಿರಂಗವಾಗಿದೆ. ಇದರ ಬೆನ್ನಲ್ಲೇ ಮಹೇಂದ್ರ ರೆಡ್ಡಿಯನ್ನು ಪೊಲೀಸರು ಅರೆಸ್ಟ್ ಮಾಡಿ ತೀವ್ರ ವಿಚಾರಗೊಳಪಡಿಸುತ್ತಿದ್ದಾರೆ. ಈ ವೇಳೆ ಆತ ಕೃತ್ಯವೆಸಗಲು ಕಾರಣವೇನೆಂದು ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ.

ಮಹೇಂದ್ರ ರೆಡ್ಡಿಗೆ ಒಂದಲ್ಲಾ, ಎರಡಲ್ಲಾ ಹಲವು ಯುವತಿಯರೊಂದಿಗೆ ಅಕ್ರಮ ಸಂಬಂಧವಿತ್ತು. ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತ್ನಿಯನ್ನು ಮಹೇಂದ್ರ ರೆಡ್ಡಿ ಕೊಲೆ ಮಾಡಲು ಈ ಸಂಚು ರೂಪಿಸಿದ್ದ. ಕೇವಲ ಕರ್ನಾಟಕ ಮಾತ್ರವಲ್ಲ ಮುಂಬೈ ಸೇರಿದಂತೆ ಹಲವು ಕಡೆಗಳಲ್ಲಿ ಆತ ಯುವತಿಯರ ಜೊತೆ ಸಂಪರ್ಕ ಹೊಂದಿದ್ದ. ಹಲವು ಯುವತಿಯರ ಜೊತೆ ಈತ ಚೆಲ್ಲಾಟವಾಡಿದ್ದ. ಇದೀಗ ಈ ಅಕ್ರಮ ಸಂಬಂಧಗಳ ಸಲುವಾಗಿಯೇ ಕೃತಿಕಾಳನ್ನು ಹತ್ಯೆ ಮಾಡಿದ್ದನೇ ಎಂಬ ನಿಟ್ಟಿನಲ್ಲಿ ಆತನ ಫೋನ್ ಕರೆಗಳನ್ನು ಪರಿಶೀಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಬಾಡೂಟ ತಿಂದ ಬಳಿಕ ನಿಮ್ಮ ಡಯಟ್ ಹೀಗಿರಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ವೀರೇಶ್ ಪ್ರಕರಣಕ್ಕೆ ಟ್ವಿಸ್ಟ್

ಮುಂದಿನ ಸುದ್ದಿ
Show comments