ಡಾ ಕೃತಿಕಾ ರೆಡ್ಡಿ ಮರ್ಡರ್ ಮಾಡಿದ್ದ ಡಾ ಮಹೇಂದ್ರ ಅಸಲಿ ವಿಚಾರಗಳು ಕೊನೆಗೂ ಬಯಲು

Krishnaveni K
ಗುರುವಾರ, 23 ಅಕ್ಟೋಬರ್ 2025 (14:00 IST)
ಬೆಂಗಳೂರು: ಡಾ ಕೃತಿಕಾ ರೆಡ್ಡಿಯನ್ನು ಮರ್ಡರ್ ಮಾಡಿದ್ದ ಪತಿ ಡಾ ಮಹೇಂದ್ರ ರೆಡ್ಡಿಯ ಅಸಲಿ ವಿಚಾರಗಳು ಕೊನೆಗೂ ಬಯಲಾಗಿವೆ. ಆತ ಪೊಲೀಸರ ಮುಂದೆ ಕೆಲವು ಸ್ಪೋಟಕ ಸತ್ಯಗಳನ್ನು ಬಾಯ್ಬಿಟ್ಟಿದ್ದಾನೆ.

ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದ ಪತ್ನಿಗೆ ಅನಸ್ತೇಷಿಯಾ ಓವರ್ ಡೋಸ್ ನೀಡಿ ಡಾ ಮಹೇಂದ್ರ ರೆಡ್ಡಿ ಕೊಲೆ ಮಾಡಿದ್ದ. ಏಪ್ರಿಲ್ ನಲ್ಲಿ ಘಟನೆ ನಡೆದಿದ್ದರೂ ಈತನ ಬಗ್ಗೆ ಯಾರಿಗೂ ಸಂಶಯವೇ ಬಾರದಂತೆ ನಡೆದುಕೊಂಡಿದ್ದ. ಆದರೆ ಎಫ್ಎಸ್ಎಲ್ ವರದಿಯಲ್ಲಿ ಇದೀಗ ಇದು ಕೊಲೆ ಎಂಬುದು ಬಯಲಾಗಿತ್ತು.

ಅದರಂತೆ ಆತನನ್ನು ಬಂಧಿಸಿರುವ ಪೊಲೀಸರು ಕೊಲೆಯ ಹಿಂದಿನ ಕಾರಣ ಮತ್ತು ಕೃತ್ಯ ನಡೆಸಿದ್ದು ಹೇಗೆ ಎಂಬಿತ್ಯಾದಿ ವಿಚಾರಗಳನ್ನು ಬಾಯಿಬಿಡಿಸಿದ್ದಾರೆ. ಸದ್ಯಕ್ಕೆ ಆರೋಪಿ ತಪ್ಪೊಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ.

ಹೇಗೆ ಕೊಲೆ ಮಾಡಿದ್ದ?
ಕೃತಿಕಾಗೆ ಅನಾರೋಗ್ಯ ಸಮಸ್ಯೆಯಿಂದ ಮಹೇಂದ್ರ ರೆಡ್ಡಿ ಹತಾಶೆಗೊಳಗಾಗಿದ್ದ. ತನ್ನ ಪತ್ನಿಯಿಂದಾಗಿ ನನಗೆ ಸಂತೋಷವಿಲ್ಲ ಎಂದು ಸಿಟ್ಟಿಗೆದ್ದಿದ್ದ. ಇದೇ ಕಾರಣವಿಟ್ಟುಕೊಂಡು ವಿಚ್ಛೇದನ ನೀಡಿದರೆ ಕೃತಿಕಾ ಜೊತೆಗೆ ಬರುತ್ತಿದ್ದ ಆಸ್ತಿ ಕೈ ತಪ್ಪಿ ಹೋಗುತ್ತಿತ್ತು. ಅತ್ತ ಆಸ್ತಿಯೂ ತನಗೆ ಸಿಗಬೇಕು, ಕೃತಿಕಾಳೂ ಇರಬಾರದು ಎನ್ನುವ ಕಾರಣಕ್ಕೆ ಆಕೆಯನ್ನು ಕೊಲೆ ಮಾಡಿದ್ದ. ಕೃತಿಕಾ ದೇಹ ತೂಕಕ್ಕೆ ಸಾಮಾನ್ಯವಾಗಿ ನೀಡಬೇಕಾಗಿದ್ದ ಅನಸ್ತೇಷಿಯಾದ ಡಬಲ್ ಡೋಸ್ ಅನಸ್ತೇಷಿಯಾ ನೀಡಿದ್ದ. ಇದರಿಂದಾಗಿ ಆಕೆ ಸಾವನ್ನಪ್ಪಿದ್ದಾಳೆ.

ಮಹೇಂದ್ರ ರೆಡ್ಡಿ ಫೋನ್ ರಹಸ್ಯ
ಇನ್ನು, ಮಹೇಂದ್ರ ರೆಡ್ಡಿಗೆ ಅನೈತಿಕ ಸಂಬಂಧಗಳೂ ಇತ್ತು ಎಂದು ಹೇಳಲಾಗುತ್ತಿದೆ. ಆತನ ಫೋನ್ ನ್ನು ವಶಕ್ಕೆ ಪಡೆದಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಈ ವೇಳೆ ಆತನ ಫೋನ್ ನಿಂದ ಐ ಹ್ಯಾವ್ ಕಿಲ್ಲ್ ಡ್ ಕೃತಿಕಾ ಎಂದು ಸಂದೇಶ ರವಾನಿಸಿರುವುದು ಗೊತ್ತಾಗಿದೆ. ಈ ರೀತಿ ಆತ ಮೆಸೇಜ್ ಮಾಡಿರುವುದು ಯಾರಿಗೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments