Webdunia - Bharat's app for daily news and videos

Install App

ಮಲ್ಲೇಶ್ವರ ಉದ್ಯೋಗ ಮೇಳ: 351 ಅಭ್ಯರ್ಥಿಗಳಿಗೆ ನೇಮಕ ಪತ್ರ ನೀಡಿದ ಡಾ.ಸಿ.ಎನ್.ಅಶ್ವತ್ಥನಾರಾಯಣ

Webdunia
ಶನಿವಾರ, 4 ಸೆಪ್ಟಂಬರ್ 2021 (20:47 IST)
ಬೆಂಗಳೂರು: ಮಲ್ಲೇಶ್ವರದಲ್ಲಿ ಶುಕ್ರವಾರ ನಡೆದ ಉದ್ಯೋಗ ಮೇಳದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರಾಜ್ಯ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಶೀಲತಾ ಖಾತೆ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಶನಿವಾರ ನೇಮಕ ಪತ್ರಗಳನ್ನು ನೀಡಿದರು. 
 
ಮಲ್ಲೇಶ್ವರದ 5ನೇ ಮುಖ್ಯರಸ್ತೆಯಲ್ಲಿರುವ ವಾಲಿಬಾಲ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಜಾಬ್ ಮೇಳದಲ್ಲಿ 351 ಅಭ್ಯರ್ಥಿಗಳಿಗೆ ಉದ್ಯೋಗ ಸಿಕ್ಕಿದ್ದು, ಎಲ್ಲರಿಗೂ ಇಂದು ನೇಮಕಾತಿ ಪತ್ರಗಳನ್ನು ನೀಡಲಾಗಿದೆ ಎಂದು ಇದೇ ವೇಳೆ ಸಚಿವರು ತಿಳಿಸಿದರು. 
 
ಒಟ್ಟು ಮೇಳದಲ್ಲಿ 42ಕ್ಕೂ ಹೆಚ್ಚು ಕಂಪನಿಗಳು ನೇಮಕ ಪ್ರಕ್ರಿಯೆ ನಡೆಸಿದವು. ಒಟ್ಟು 2050 ಅಭ್ಯರ್ಥಿಗಳು ನೋಂದಾಯಿಸಿಕೊಂಡು, 1510 ಅಭ್ಯರ್ಥಿಗಳು ಹಾಜರಾಗಿದ್ದರು. ಈ ಪೈಕಿ 582 ಅಭ್ಯರ್ಥಿಗಳನ್ನು ಪಟ್ಟಿ ಮಾಡಿದ ನಂತರ ಅಂತಿಮವಾಗಿ 351 ಅಭ್ಯರ್ಥಿಗಳು ವಿವಿಧ ಕಂಪನಿಗಳ ಕೆಲಸಕ್ಕೆ ಆಯ್ಕೆಯಾಗಿದ್ದಾರೆಂದು ಡಾ.ಅಶ್ವತ್ಥನಾರಾಯಣ ಮಾಹಿತಿ ತಿಳಿಸಿದರು. 
 
ಇನ್ನಷ್ಟು ಜಾಬ್ ಮೇಳಗಳನ್ನು ನಡೆಸಲಾಗುವುದು. ಉದ್ಯೋಗ ಅಗತ್ಯ ಇರುವ ಅಭ್ಯರ್ಥಿಗಳು ಹಾಜರಾಗಿ ಅವಕಾಶವನ್ನು ಪಡೆಯಬಹುದು ಎಂದ ಸಚಿವರು, ರಾಜ್ಯದಲ್ಲಿ ಕೈಗಾರಿಕೆಗಳ ಬೇಡಿಕೆಗೆ ತಕ್ಕಂತೆ ಕುಶಲ ಸಂಪನ್ಮೂಲ ಒದಗಿಸುವ ಕೆಲಸವನ್ನು ಸರಕಾರ ಮಾಡುತ್ತಿದೆ. ಈ ನಿಟ್ಟಿನಲ್ಲಿ ಎಷ್ಟೇ ಉದ್ಯೋಗಾಂಕ್ಷಿಗಳು ಬಂದರೂ ಅಗತ್ಯ  ತರಬೇತಿ, ಭಾಷಾ ಕೌಶಲ್ಯತೆ ಕಲಿಸಿ ಕೆಲಸ ಕೊಡಸಲಾಗುವುದು ಎಂದರು.
education

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments