Webdunia - Bharat's app for daily news and videos

Install App

ವಿದ್ವತ್ ಬಗ್ಗೆ ಭಾವುಕರಾಗಿ ಬರೆದುಕೊಂಡ ಡಾ.ರಾಜ್ ಮೊಮ್ಮಗ!

Webdunia
ಗುರುವಾರ, 22 ಫೆಬ್ರವರಿ 2018 (10:12 IST)
ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಗ್ಯಾಂಗ್ ನಿಂದ ಹಲ್ಲೆಗೊಳಗಾದ ವಿದ್ವತ್ ಬಗ್ಗೆ ಘಟನೆಗೆ ಸಾಕ್ಷಿಯಾಗಿದ್ದ ಡಾ. ರಾಜ್ ಮೊಮ್ಮಗ ಗುರು ರಾಜ್ ಕುಮಾರ್ ಮನದಾಳ ಹಂಚಿಕೊಂಡಿದ್ದಾರೆ.
 

ವಿದ್ವತ್ ಕುಟುಂಬಕ್ಕೆ ಸಮೀಪವರ್ತಿಗಳಾಗಿರುವ ಡಾ. ರಾಜ್ ಕುಟುಂಬ ಸದಸ್ಯರು ಈಗಾಗಲೇ ಆತನನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಅಲ್ಲದೆ, ಘಟನೆ ನಡೆಯುವಾಗ ಗುರು ರಾಜ್ ಕುಮಾರ್ ಅಲ್ಲಿಯೇ ಇದ್ದರು ಎನ್ನಲಾಗಿದೆ.

ಅಷ್ಟೇ ಅಲ್ಲದೆ, ವಿದ್ವತ್ ತಮ್ಮ ಮನೆ ಮಗನಂತೆ ತಮ್ಮ ಮಕ್ಕಳ ಜತೆಯೇ ಬೆಳೆದವನು ಎಂದು ಈಗಾಗಲೇ ಪುನೀತ್ ರಾಜ್ ಕುಮಾರ್ ಹೇಳಿಕೊಂಡಿದ್ದರು. ಇದೀಗ ಗುರು ರಾಜ್ ಕುಮಾರ್ ತನ್ನ ಸ್ನೇಹಿತನ ಬಗ್ಗೆ ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ.

‘ಪ್ರೈಮರಿ ಶಾಲೆಯಿಂದ ಜತೆಗಿದ್ದೇವೆ. ವಿದ್ವತ್ ನನ್ನ ಸಹೋದರನಿದ್ದಂತೆ. ಆತನಿಗೆ ನೋವಾದರೆ ನಮಗೆ ನೋವಾದಂತೆ. ಆದಷ್ಟು ಬೇಗ ಹುಷಾರಾಗು ಸಹೋದರ.. ನಿನ್ನ ಜತೆ ನಾನಿದ್ದೇವೆ’ ಎಂದಿದ್ದಾರೆ.

ಅಷ್ಟೇ ಅಲ್ಲದೆ, ‘ಕರ್ನಾಟಕದಲ್ಲಿ ಸುರಕ್ಷತೆಗೆ ಆದ್ಯತೆ ಇರಬೇಕು. ತಪ್ಪಿತಸ್ಥರಿಗೆ ಶಿಕ್ಷೆ ತಪ್ಪಿದ್ದಲ್ಲ’ ಎಂದೂ ಸ್ಟೇಟಸ್ ಹಾಕಿದ್ದಾರೆ. ಅವರ ಈ ಸಂದೇಶಕ್ಕೆ ಹಲವರು ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

RCB Victory Parade: ಕಾಲ್ತುಳಿತದಲ್ಲಿ ಮೂವರು ಫ್ಯಾನ್ಸ್ ಸಾವು, ಹಲವು ಮಂದಿಗೆ ಗಾಯ

ಮುಂದಿನ ಸುದ್ದಿ
Show comments