Webdunia - Bharat's app for daily news and videos

Install App

ತೇಜಸ್ವಿ ಸೂರ್ಯ ವಿರುದ್ಧ ವಾಗ್ದಾಳಿ ನಡೆಸಿದ ಡಾ.ಶಂಕರ ಗುಹಾ

Webdunia
ಬುಧವಾರ, 18 ಜನವರಿ 2023 (20:07 IST)
ಶ್ರೀ ರಾಘವೇಂದ್ರ ಕೋ ಆಪರೇಟಿವ್ ಸೊಸೈಟಿ ಹಾಗೂ ವಸಿಷ್ಠ ಬ್ಯಾಂಕ್ ಹಗರಣದ ತನಿಖೆ ಸರ್ಕಾರ ಸಿಬಿಐಗೆ ವಹಿಸಲು ತೀರ್ಮಾನಿಸಿರುವುದು ಸ್ವಾಗತ. ಎರಡೂವರೆ ವರ್ಷದ ಹೋರಾಟಕ್ಕೆ ಒಂದು ಹಂತದಲ್ಲಿ ಜಯ ಸಿಕ್ಕಿದೆ ಎಂದು ಶ್ರೀ ಗುರು ರಾಘವೇಂದ್ರ ಕೋ- ಆಪರೇಟಿವ್ ಬ್ಯಾಂಕ್ ಷೇರುದಾರರು ಮತ್ತು ಠೇವಣಿದಾರರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಡಾ.ಶಂಕರ ಗುಹಾ ಹೇಳಿದ್ದಾರೆ. ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ನಿನ್ನೆ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ರಾಘವೇಂದ್ರ ಬ್ಯಾಂಕ್ ಹಗರಣ ಜೊತೆ ವಸಿಷ್ಠ ಬ್ಯಾಂಕ್ ಹಗರಣವನ್ನು ಸಿಬಿಐ ತನಿಖೆಗೆ ನೀಡುವ ಬಗ್ಗೆ ತಿಳಿಸಿದ್ದಾರೆ. ಇದರ ಜೊತೆ 120 ಸೊಸೈಟಿಗಳು ಹಗರಣದಲ್ಲಿ ಸಿಲುಕಿದೆ. ಸೊಸೈಟಿ ಮಾಲೀಕರು ಲೋನ್ ಪಡೆದು ಪರಾರಿಯಾಗಿದ್ದು, ಬೇಲ್ ಮೇಲೆ ಹೊರಗಿದ್ದಾರೆ. ಕಣ್ವ ಬ್ಯಾಂಕ್ ಕೂಡ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು. ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕ ರವಿಸುಬ್ರಹ್ಮಣ್ಯ ನಾವೇ ದುಡ್ಡು ಕೊಡಿಸಿದೆವು ಅನ್ನೋ ರೀತಿ ಪ್ರಚಾರ ಮಾಡಿಕೊಂಡಿದ್ರು. 850 ಕೇಸ್ ತನಿಖೆಗೆ ಸಿಐಡಿಗೆ ಹೋಗಿದೆ: ನಮ್ಮ ದುಡ್ಡು ನಮಗೆ ಕೊಟ್ಟಿದ್ದಾರೆ, ಇದಕ್ಕೆ ಅವರಿಗೆ ಶಬ್ಬಾಶ್‌ ಗಿರಿ ಹೇಳಬೇಕಿಲ್ಲ. ಈ ಬಗ್ಗೆ ಇದುವರೆಗೂ ಇಬ್ಬರೂ ಯಾವುದೇ ಹೇಳಿಕೆ ನೀಡಿಲ್ಲ. ಸಿಬಿಐ ತನಿಖೆಯಿಂದ ಅವರಿಗೆ ಭಯ ಆಗಿದೆಯೋ ಏನೋ ಗೊತ್ತಿಲ್ಲ ಎಂದು ಟೀಕಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಹೃದಯಾಘಾತ ತಡೆಯಲು ಮೂರು ಪರೀಕ್ಷೆಗಳು ಕಡ್ಡಾಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಕೇಸ್ ಬಗ್ಗೆ ಇಂದು ಸಚಿವ ಪರಮೇಶ್ವರ್ ಏನು ಹೇಳ್ತಾರೆ ಎಂಬುದೇ ಎಲ್ಲರ ಕುತೂಹಲ

ಮುಂದಿನ ಸುದ್ದಿ
Show comments