Webdunia - Bharat's app for daily news and videos

Install App

ದೆಹಲಿ ವಿಶೇಷ ಪ್ರತಿನಿಧಿಯಾಗಿ ಡಾ. ಅಜಯ್ ಅಧಿಕಾರ ಸ್ವೀಕಾರ

Webdunia
ಮಂಗಳವಾರ, 29 ಜನವರಿ 2019 (17:35 IST)
ರಾಜ್ಯ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿಯಾಗಿ ಶಾಸಕ ಡಾ. ಅಜಯ್ಸಿಂಗ್ ಇಂದು ಕಾರ್ಯಭಾರ ವಹಿಸಿಕೊಂಡಿದ್ದಾರೆ.

ವಿಧಾನಸೌಧದ ಬ್ಲಾಕ್ವೆಂಟ್ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಪಾಲ್ಗೊಂಡು ಡಾ. ಅಜಯ್ಸಿಂಗ್ರವರಿಗೆ ಶುಭ ಹಾರೈಸಿದರು.

ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವರುಗಳಾದ ಶಿವಾನಂದ ಪಾಟೀಲ್, ಎಂ.ಬಿ. ಪಾಟೀಲ್, ಕೃಷ್ಣಭೈರೇಗೌಡ, ತುಕಾರಾಂ, ರಹೀಂಖಾನ್, ಡಾ. ಜಯಮಾಲಾ ಸೇರಿದಂತೆ ಹಲವು ಸಚಿವರು, ಹಲವು ಕಾಂಗ್ರೆಸ್ ಶಾಸಕರುಗಳು ಪಾಲ್ಗೊಂಡು ಶುಭ ಕೋರಿದರು.

ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಯಾಗಿರುವ ಡಾ. ಅಜಯ್ಸಿಂಗ್ ಮತ್ತು ಅವರ ಸಹೋದರ ವಿಜಯಸಿಂಗ್ ಅವರ ಹುಟ್ಟುಹಬ್ಬ ಇವತ್ತೇ ಆಗಿದ್ದು, ಹುಟ್ಟುಹಬ್ಬದಂದೆ ಡಾ. ಅಜಯ್ಸಿಂಗ್ ದೆಹಲಿ ಪ್ರತಿನಿಧಿಯಾಗಿ ಕಾರ್ಯಭಾರ ವಹಿಸಿಕೊಂಡಿದ್ದು ಕಾಕತಾಳಿಯವಾಗಿತ್ತು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments