ಬೆಂಗಳೂರು ಟೆಕ್ ಸಮ್ಮಿಟ್​ಗೆ ಚಾಲನೆ

Webdunia
ಬುಧವಾರ, 16 ನವೆಂಬರ್ 2022 (18:21 IST)
ಬೆಂಗಳೂರು ಟೆಕ್ ಸಮ್ಮಿಟ್​​​​ಗೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಚಾಲನೆ ನೀಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ಆರಂಭಗೊಂಡಿದ್ದು, ಏಷ್ಯಾ ಖಂಡದಲ್ಲೇ ಮಹತ್ವದ ಕಾರ್ಯಕ್ರಮವೆಂದು ಹೆಸರಾಗಿರುವ ಈ ತಂತ್ರಜ್ಞಾನ ಸಮಾವೇಶ ಬೆಂಗಳೂರು ಅರಮನೆ ಮೈದಾನದಲ್ಲಿ 3 ದಿನಗಳ ಕಾಲ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ‌ ಬಸವರಾಜ ಬೊಮ್ಮಾಯಿ, ಸಚಿವರಾದ ಡಾ. ಅಶ್ವತ್ಥ ನಾರಾಯಣ, ಮುರುಗೇಶ್ ಆರ್ ನಿರಾಣಿ, ಬಯೋಟೆಕ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ, ಸಂಯುಕ್ತ ಅರಬ್‌ ಸಂಸ್ಥಾನದ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಖಾತೆಯ ಸಹಾಯಕ ಸಚಿವ ಒಮರ್ ಬಿನ್‌ ಸುಲ್ತಾನ್‌ ಅಲ್‌ ಒಲಾಮಾ, ಆಸ್ಟ್ರೇಲಿಯಾದ ವಿದೇಶಾಂಗ ಖಾತೆ ಸಹಾಯಕ ಸಚಿವ ಟಿಮ್‌ ವ್ಯಾಟ್ಸ್, ಫಿನ್ಲೆಂಡ್‌ನ ವಿಜ್ಞಾನ ಸಚಿವ ಪೆಟ್ರಿ ಹಾನ್ಕೊನೆನ್‌, ಭಾರತದ ಪ್ರಪ್ರಥಮ ಯೂನಿಕಾರ್ನ್ ಕಂಪನಿ 'ಇಮ್ಮೊಬಿ'ಯ ಸಂಸ್ಥಾಪಕ ನವೀನ್‌ ತೆವಾರಿ, ಫ್ರಾನ್ಸ್‌ ಅಧ್ಯಕ್ಷ ಇಮ್ಯಾನ್ಯುಯೆಲ್‌ ಮ್ಯಾಕ್ರೋನ್‌ (ವರ್ಚುಯಲ್‌) ಮತ್ತು ಅಮೆರಿಕದ ಕಿಂಡ್ರಿಲ್‌ ಕಂಪನಿಯ ಸಿಇಒ ಮಾರ್ಟಿನ್‌ ಶ್ರೋಟರ್ ಭಾಗಿಯಾಗಿದ್ದಾರೆ. ಸಮಾವೇಶದಲ್ಲಿ ಸುಮಾರು 75 ಗೋಷ್ಠಿಗಳು ನಡೆಯಲಿವೆ. ಕೃತಕ ಬುದ್ಧಿಮತ್ತೆ, ಬಿಗ್ ಡೇಟಾ, ಸೆಮಿಕಂಡಕ್ಟರ್, ಮಷೀನ್ ಲರ್ನಿಂಗ್, 5ಜಿ, ರೋಬೋಟಿಕ್ಸ್, ಫಿನ್ ಟೆಕ್, ಜೀನ್ ಎಡಿಟಿಂಗ್, ಮೆಡಿ ಟೆಕ್, ಸ್ಪೇಸ್ ಟೆಕ್, ಜೈವಿಕ ಇಂಧನ ಸುಸ್ಥಿರತೆ, ಇ- ಸಂಚಾರ ಹೀಗೆ ವಿವಿಧ ತಾಂತ್ರಿಕ ಬೆಳವಣಿಗೆಗಳ ಬಗ್ಗೆ ಸಂವಾದಗಳು ನಡೆಯಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಪತಿ ಲಡ್ಡು ಪ್ರಕರಣ: 15 ತಿಂಗಳ ತನಿಖೆ ಬಳಿಕ ಕೊನೆಗೂ ಜಾರ್ಜ್‌ಶೀಟ್ ಸಲ್ಲಿಕೆ, ಇವರೇ ಪ್ರಮುಖ ಆರೋಪಿಗಳು

ಎಂಬಿಬಿಎಸ್ ಸೀಟಿಗಾಗಿ ತನ್ನ ಕಾಲನ್ನು ತಾನೇ ಕಟ್ ಮಾಡಿಕೊಂಡ ವ್ಯಕ್ತಿ

ದುನಿಯಾ ವಿಜಯ್ ಲ್ಯಾಂಡ್‌ ಲಾರ್ಡ್ ಸಿನಿಮಾ ನೋಡುತ್ತೇನೆಂದ ಸಿಎಂ ಸಿದ್ದರಾಮಯ್ಯ

ನಾನು ಕಾಂಗ್ರೆಸ್ ಪಕ್ಷದ ರೇಖೆಯನ್ನು ಉಲ್ಲಂಘಿಸಿಲ್ಲ: ಶಶಿ ತರೂರ್‌ ಸ್ಪಷ್ಟನೆ

ನಂದಿನಿ ಹಾಲು, ಮೊಸರು ಇದೀಗ ₹10ಕ್ಕೂ ಲಭ್ಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments