ಚಲನಚಿತ್ರೋತ್ಸವ ವೈಭವಕ್ಕೆ ಚಾಲನೆ

Webdunia
ಶುಕ್ರವಾರ, 4 ಮಾರ್ಚ್ 2022 (07:04 IST)
ಬೆಂಗಳೂರು : 13ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಇಂದು ಸಂಜೆ ವರ್ಣರಂಜಿತವಾಗಿ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.
 
ಬೊಮ್ಮಾಯಿ ಅವರು ದೀಪ ಬೆಳಗಿಸುವ ಮೂಲಕ ಚಲನಚಿತ್ರೋತ್ಸವಕ್ಕೆ ವೈಭವಕ್ಕೆ ಚಾಲನೆ ಕೊಟ್ಟರು. ಈ ವೇಳೆ ಸಿನಿಮಾ ಕುರಿತು ಮಾತನಾಡಿದ ಅವರು, ವೇದಿಕೆ ಮೇಲಿರುವ ಎಲ್ಲರೂ ಬಹಳ ಸಂತೋಷದಿಂದ ಚಾಲನೆ ನೀಡಿದ್ದೇವೆ.

1934 ಮಾರ್ಚ್ 03 ಅಂದರೆ ಇದೇ ದಿನ ಕನ್ನಡದ ‘ಸತಿ ಸುಲೋಚನಾ’ ಸಿನಿಮಾ ತೆರೆಕಂಡಿತು. ಈ ದಿನವನ್ನು ‘ವಿಶ್ವ ಕನ್ನಡ ಸಿನಿಮಾ ದಿನ’ವೆಂದು ಘೋಷಣೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.

ಬೆಂಗಳೂರು ಚಲನಚಿತ್ರೋತ್ಸವ ನಂಬರ್ ಒನ್ ಆಗುವಂತೆ ಮಾಡಬೇಕು. ಸಾಮಾಜಿಕ ಸಂದೇಶ ಇರುವಂಥ ಸಿನಿಮಾಗಳನ್ನು ಮಾಡಬೇಕು. ಕಪ್ಪುಬಿಳುಪು ಸಿನಿಮಾಗಳಲ್ಲಿ ಸೃಜನಾತ್ಮಕತೆ ಅಪಾರ. ಇತ್ತೀಚೆಗೆ ಸ್ಪೆಷಲ್ ಎಫೆಕ್ಟ್ ತೋರಿಸಲು ಕಪ್ಪುಬಿಳುಪು ಬಳಸಲಾಗುತ್ತೆ. ಸಿನಿಮಾದವರು ಚಿತ್ರೋತ್ಸವ ನೋಡಬೇಕು ಎಂದು ಮನವಿ ಮಾಡಿದರು.

ಖ್ಯಾತ ನಟ ದಿ.ಪುನೀತ್ ರಾಜ್ಕುಮಾರ್ ಅವರನ್ನು ಈ ವೇಳೆ ಬೊಮ್ಮಾಯಿ ಅವರು ನೆನಪಿಸಿಕೊಂಡರು. ಪುನೀತ್ ಅವರು ಸಮಾಜಕ್ಕೆ ಮತ್ತು ಸಿನಿಮಾರಂಗಕ್ಕೆ ಕೊಟ್ಟ ಕೊಡುಗೆ ಎಂದು ಶಾಶ್ವತವಾಗಿ ಉಳಿಯುತ್ತವೆ.

ಪುನೀತ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನಿಡಲು ನಿರ್ಧರಿಸಿದ್ದೇವೆ. ಶೀಘ್ರದಲ್ಲೇ ಸಮಾರಂಭದ ದಿನಾಂಕ ಪ್ರಕಟಿಸಲಾಗುವುದು. ಮೈಸೂರಿನಲ್ಲಿ ಚಿತ್ರನಗರಿ ಮಾಡಲು ಮುಂದಿನ ವರ್ಚ ಅಗತ್ಯ ಕ್ರಮ ಕೈಗೊಳ್ಳಲಾಗುತ್ತೆ ಎಂದು ಸೂಚಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದೆಹಲಿ ಸ್ಪೋಟ ನಡೆಸಿದ ವ್ಯಕ್ತಿಯ ಬಗ್ಗೆ ಸ್ಪೋಟಕ ಮಾಹಿತಿ ಲಭ್ಯ

ದೆಹಲಿಯಲ್ಲಿ ಸ್ಪೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ: ಸಿಎಂ ಮಹತ್ವದ ಸಂದೇಶ

ಮೋದಿ ಭೂತಾನ್ ಪ್ರವಾಸ: ದೆಹಲಿಯಲ್ಲಿ ಸ್ಪೋಟವಾಗಿರುವಾಗ ವಿದೇಶ ಯಾತ್ರೆ ಬೇಕಿತ್ತಾ ಎಂದ ನೆಟ್ಟಿಗರು

ದೆಹಲಿ ಸ್ಪೋಟ ಬೆನ್ನಲ್ಲೇ ಶುರುವಾಯ್ತು ಕಾರಣ ಯಾರು ಶುರುವಾಯ್ತು ಕೆಸರೆರಚಾಟ

ಮುಂದಿನ ಸುದ್ದಿ
Show comments