ಗ್ರಾಮ ಒನ್ ಯೋಜನೆಗೆ ಮೂರ್ನಾಡು ಗ್ರಾಮದಲ್ಲಿ ಚಾಲನೆ

Webdunia
ಶುಕ್ರವಾರ, 28 ಜನವರಿ 2022 (15:02 IST)
ಗ್ರಾಮ ಒನ್ ಯೋಜನೆಯು ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ನಾಗರಿಕ ಸ್ನೇಹಿ ಯೋಜನೆಯಾಗಿರುವ ‘ಗ್ರಾಮ ಒನ್’ ಯೋಜನೆಗೆ ಕೊಡಗು ಜಿಲ್ಲೆ ಆಯ್ಕೆಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ‘ಗ್ರಾಮ ಒನ್ ಯೋಜನೆ’ಗೆ ವರ್ಚುವಲ್ ಮೂಲಕ ಬುಧವಾರ ಚಾಲನೆ ನೀಡಿದರು.
ಗ್ರಾಮೀಣ ಜನರಿಗೆ ಒಂದೇ ಸೂರಿನಡಿ ಎಲ್ಲಾ ಇಲಾಖೆಗಳ ಸೇವೆಗಳನ್ನು ಅವರ ಸ್ವಂತ ಗ್ರಾಮದಲ್ಲಿ ತಲುಪಿಸುವ ಗುರಿಯನ್ನು ಈ ಯೋಜನೆ ಹೊಂದಿದ್ದು, ಆ ದಿಸೆಯಲ್ಲಿ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕನಿಷ್ಟ ಒಂದು ‘ಗ್ರಾಮ ಒನ್’ ಕೇಂದ್ರ ಸ್ಥಾಪಿಸಲಾಗುತ್ತಿದೆ.
 
ಅದರಂತೆ ಕೊಡಗಿ‌ನ ಮೂರ್ನಾಡು ಗ್ರಾಮ ಪಂಚಾಯತ್’ನಲ್ಲಿ ಜಿಲ್ಲೆಯ ಪ್ರಥಮ ಗ್ರಾಮ ಒನ್ ಕೇಂದ್ರಕ್ಕೆ ಮುಖ್ಯಮಂತ್ರಿ ಚಾಲನೆ ನೀಡಿದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್, ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಮತ್ತಿತರರು ಕಾಂತೂರು-ಮೂರ್ನಾಡು ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ವರ್ಚುವಲ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಬಳಿಕ ಮಾತನಾಡಿದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಅವರು, ಗ್ರಾ,ಪಂ ಮಟ್ಟದಲ್ಲಿ ಗ್ರಾಮ ಒನ್ ಯೋಜನೆಗೆ ಸರ್ಕಾರ ಚಾಲನೆ ನೀಡಿದೆ. ಗ್ರಾಮ ಒನ್ ಮೂಲಕ ಗ್ರಾಮೀಣ ಸೇವೆಗಳು ಲಭ್ಯವಾಗಲಿವೆ ಎಂದರು.
ಗ್ರಾಮ ಒನ್ ಯೋಜನೆಯ ಮೂಲಕ ನಾಗರಿಕರ ಮನೆ ಬಳಿಯೇ ಸೇವಾ ಸಿಂಧೂ ವೇದಿಕೆಯ ಮೂಲಕ 100 ಕ್ಕೂ ಹೆಚ್ಚು ಸೇವೆಗಳು ಲಭ್ಯವಾಗಲಿವೆ ಎಂದು ಸಚಿವರು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು ಮತ್ತಿತರರು ಇದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments