ರಾಜ್ಯ ಮಟ್ಟದ ವ್ಹಾಲಿಬಾಲ್ ಕ್ರೀಡಾಕೂಟಕ್ಕೆ ಚಾಲನೆ

Webdunia
ಭಾನುವಾರ, 28 ಅಕ್ಟೋಬರ್ 2018 (19:19 IST)
2018-19ನೇ ಸಾಲಿನ‌ ರಾಜ್ಯ ಮಟ್ಟದ ವ್ಹಾಲಿಬಾಲ್ ಪಂದ್ಯಾವಳಿಯನ್ನು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಇದೇ ಮೊದಲ ಬಾರಿಗೆ ಆಯೋಜನೆ‌ ಮಾಡಲಾಗಿದೆ.

ನಾಲ್ಕು ದಿನಗಳ ಕಾಲ ನಡೆಯಲಿರುವ ರಾಜ್ಯಮಟ್ಟದ ವ್ಹಾಲಿಬಾಲ್ ಪಂದ್ಯಾವಳಿಗೆ ರಾಜ್ಯದ 31 ಜಿಲ್ಲೆಗಳು ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಿಂದ ಹಿಡಿದು ರಾಜ್ಯದ ಒಟ್ಟು 32 ಬಾಲಕ ಮತ್ತು ಬಾಲಕಿಯರ ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿವೆ. ಇನ್ನು ಪ್ರತಿ ತಂಡದಲ್ಲಿ 12 ಕ್ರೀಡಾಪಟುಗಳು, ಓರ್ವ ವ್ಯವಸ್ಥಾಪಕರು ಪಾಲ್ಗೊಳ್ಳಲಿದ್ದು ಒಟ್ಟು
384 ಪುರುಷ ಕ್ರೀಡಾಪಟುಗಳು, 384 ಮಹಿಳಾ ಕ್ರೀಡಾಪಟುಗಳು ಸೇರಿ ಒಟ್ಟು 768 ಕ್ರೀಡಾಪಟುಗಳು ಪಂದ್ಯಾವಳಿಯಲ್ಲಿ ಭಾಗಿಯಾಗಿದ್ದಾರೆ. ಇನ್ನು ಪಂದ್ಯಾವಳಿಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ವ್ಯವಸ್ಥಾಪಕರಿಗೆ ಅಭ್ಯುದಯ ಕಾಲೇಜು, ಮುದ್ದೇಬಿಹಾಳದವರಿಂದ ವಸತಿ, ಊಟದ ಆತಿಥ್ಯ ಮಾಡಲಾಗಿದೆ. ಜೊತೆಗೆ ಅಭ್ಯೂದಯ ಕಾಲೇಜಿನ ಆವರಣದಲ್ಲಿಯೇ ಬಾಲಕರಿಗೆ ಎರಡು ಆಟದ ಮೈದಾನ ಹಾಗೂ ಬಾಲಕಿಯರಿಗೆ ಎರಡು ಆಟದ ಮೈದಾನ ಸಿದ್ದಪಡಿಸಲಾಗಿದ್ದು, ಕ್ರೀಡಾಭಿಮಾನಿಗಳು ಕುಳಿತು ಕೊಳ್ಳಲು ಉತ್ತಮ ಗ್ಯಾಲರಿಯನ್ನು ಸಿದ್ದಪಡಿಸಲಾಗಿದೆ. ಒಟ್ಟು 5000ಜನ ಕುಳಿತು ಪಂದ್ಯಾವಳಿಯನ್ನು ಇಲ್ಲಿ ವಿಕ್ಷಿಸಬಹುದಾಗಿದೆ.

ಈ ಕ್ರೀಡಾಕೂಟ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಮುದ್ದೇಬಿಹಾಳ ಪಟ್ಟಣದ ಅಭ್ಯುದಯ ವಿಜ್ಞಾನ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ನಡೆಯಲಿದ್ದು, ಇಲ್ಲಿ ವಿಜೇತವಾದ ಪ್ರಥಮ ಹಾಗೂ ದ್ವೀತಿಯ ತಂಡದ ಕ್ರೀಡಾ ಪಟುಗಳಿಗೆ ರಾಷ್ಟ್ರ ಮಟ್ಟದ ತಂಡದಲ್ಲಿ ಸ್ಪರ್ದಿಸುವ ಅವಕಾಶ ಕಲ್ಪಿಸಲಾಗುವದು ಎಂದು ಆಯೋಜಕರು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments