Webdunia - Bharat's app for daily news and videos

Install App

ಜೀವ ಲೆಕ್ಕಿಸದೆ ಪ್ರಯಾಣಿಕರನ್ನ ಕಾಪಾಡಿದ ಚಾಲಕ ಹಾಗೂ ನಿರ್ವಾಹಕ

Webdunia
ಮಂಗಳವಾರ, 6 ಸೆಪ್ಟಂಬರ್ 2022 (16:45 IST)
ರಾಮನಗರದ ಬಳಿಯಲ್ಲಿ ಕೆ ಎಸ್ ಆರ್ ಟಿಸಿ ಬಸ್ ಅಂಡರ್ ಪಾಸ್ ನಲ್ಲಿ ಮುಳುಗಿದ ಸುದ್ದಿ ನೋಡಿರುತ್ತೀರಿ. ನೀವು ಓದಿರುತ್ತೀರಿ. ಈ ವೇಳೆ ತುರ್ತು ನಿರ್ಗಮದ ಭಾಗಿಲಿನ ಮೂಲಕ ರಕ್ಷಿಸಿದವರು ಆ ಬಸ್ ಚಾಲಕ ಹಾಗೂ ನಿರ್ವಾಹಕರು.
ಮಹಾ ಮಳೆಗೆ ಊರಿಗೆ ಊರೇ ನೀರಿನಲ್ಲಿ ಮುಳುಗುತ್ತಿದ್ದು, ಹೆದ್ದಾರಿಗಳೆಲ್ಲಾ ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತ, ಈ ರಕ್ಕಸ ಮಳೆಯಲ್ಲಿ ಸಾರಿಗೆ ಬಸ್ಸುಗಳನ್ನು ಚಾಲನೆ ಮಾಡುವ ದೊಡ್ಡ ಸವಾಲು ಕೆ ಎಸ್ ಆರ್ ಟಿ ಸಿಯ ಚಾಲನಾ ಸಿಬ್ಬಂದಿಗಳದ್ದಾಗಿದೆ.
 
ಈ ನಡುವೆಯೂ ದಿನಾಂಕ: 29.08.2022 ರಂದು ರಾಮನಗರ ಮೈಸೂರು - ಬೆಂಗಳೂರು ಹೆದ್ದಾರಿ ಅಕ್ಷರಶಃ ನೀರಿನಿಂದ ಮುಳುಗಿತ್ತು. ವಾಹನ ಸಂಖ್ಯೆ ಕೆಎ42-ಎಫ್0502 ಅನುಸೂಚಿ ಸಂಖ್ಯೆ-117 (ಉರಗಹಳ್ಳಿ - ರಾಮನಗರ) ಮಾರ್ಗದಲ್ಲಿ ಚಾಲನೆಯಲ್ಲಿದ್ದಾಗ, ರಾಮನಗರ ರೈಲ್ವೇ ಬ್ರಿಡ್ಜ್ ಅಂಡರ್ ಪಾಸ್ ನಲ್ಲಿ ಬರುತ್ತಿದ್ದ ಬಸ್ಸು ಮಳೆ ನೀರಿಗೆ ಸಿಲುಕಿ ಮುಳುಗಡೆಯಾಗಿತ್ತು. ಸ್ವಲ್ಪ ಮುಂದೆ ಇದೇ ಮಾರ್ಗದಲ್ಲಿ ಮತ್ತೊಂದು ಖಾಸಗಿ ವಾಹನ ಕೆಟ್ಟು ನಿಂತಿದ್ದರಿಂದ ಬಸ್ಸನ್ನು ಮುಂದೆ ಚಲಾಯಿಸಲು ಸಾಧ್ಯವಾಗಲೇ ಇಲ್ಲ.
 
ಈ ಸಂದರ್ಭದಲ್ಲಿ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಗ್ಗೆ ಚಿಂತೆಗೊಳಗಾದಂತ ರಾಮನಗರ ಡಿಪೋ ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಕಂ ನಿರ್ವಾಹಕರಾದಂತ ಲಿಂಗರಾಜು ಹಾಗೂ ವೆಂಕಟೇಶ್ ಬ್ರಿಡ್ಜ್ ಸಮೀಪದಲ್ಲಿ ಹುಡುಕಾಡಿ ಏಣಿಯನ್ನು ತಂದಿದ್ದಾರೆ. ಆ ಏಣಿಯನ್ನು ತುರ್ತು ನಿರ್ಗಮನದ ಬಾಗಿಲಿನ ಬಳಿಗೆಹಾಕಿ ಬಸ್ಸಿನಲ್ಲಿದ್ದಂತ ಪ್ರಯಾಣಿಕರನ್ನು ಒಬ್ಬೊಬ್ಬರನ್ನಾಗಿ ಹೊರಗೆ ಇಳಿಸಿದ್ದಾರೆ.
 
ಎಸ್ ಆರ್ ಟಿ ಸಿ ಬಸ್ಸಿನಲ್ಲಿದ್ದಂತ ಪ್ರಯಾಣಿಕರನ್ನು ಎದೆ ಮಟ್ಟದ ನೀರಿನಲ್ಲಿ ನಿಂತು ಸುರಕ್ಷಿತವಾಗಿ ಇಳಿಸಿದಂತ ಚಾಲಕ ಕಂ ನಿರ್ವಾಹಕ ಲಿಂಗರಾಜು ಹಾಗೂ ವೆಂಕಟೇಶ್ ಕ್ಷಣ ಕ್ಷಣಕ್ಕೂ ಬ್ರಿಡ್ಜ್ ಕೆಳಗೆ ನೀರು ಏರಿಕೆಯಾಗುತ್ತಿದ್ದರೂ ಎದೆಗುಂದಿಲ್ಲ. ಎಲ್ಲಾ ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ, ಸುರಕ್ಷಿತ ಸ್ಥಳಕ್ಕೆ ತಲುಪಿದ ನಂತ್ರ, ಸ್ಥಳೀಯರ ನೆರವಿನಿಂದ ನೀರಿನಿಂದ ಹೊರ ಬಂದು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments