Webdunia - Bharat's app for daily news and videos

Install App

ಗೂಗಲ್ ಮ್ಯಾಪ್ ನಂಬಿ ಕಾರು ಚಾಲನೆ: ನೀರುಪಾಲಾದ ಕಾರು, ಇಬ್ಬರ ರಕ್ಷಣೆ

Sampriya
ಗುರುವಾರ, 27 ಜೂನ್ 2024 (19:48 IST)
Photo Courtesy X
ಬದಿಯಡ್ಕ: ಗೂಗಲ್ ಮ್ಯಾಪ್ ಆಧರಿಸಿ ಕಾರು ಚಲಾಯಿಸುತ್ತಿದ್ದಾಗ ತೋಡಿನ ಕಡೆ ಮ್ಯಾಪ್ ತೋರಿಸಿದ್ದರಿಂದ ಕಾರು ಸಂಪೂರ್ಣವಾಗಿ ಮುಳುಗಿದ ಘಟನೆ ಕರ್ನಾಟಕದ ಉಪ್ಪಿನಂಗಡಿಗೆ ತೆರಳುತ್ತಿದ್ದಾಗ ಇಲ್ಲಿನ ಪಳ್ಳಂಜಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಕುತ್ತಿಕೋಲಿನಿಂದ ಅರಣ್ಯದ ಮೂಲಕ ಪಾಂಡಿಗೆ ತೆರಳುವಾಗ ಪಳ್ಳಂಜಿ ತೋಡಿನ ಹಳೆಯ ಸೇತುವೆಯಲ್ಲಿ ಅವಘಡ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಅಂಜಿಲ್ಲತ್ ಹೌಸ್‌ನ ತಸ್ರೀಫ್ (36), ಪುಲ್ಲೂರ್ ಮುನಂಬಂ ಹೌಸ್‌ನ ಅಬ್ದುಲ್ ರಶೀದ್ (35) ಪಾರಾಗಿದ್ದಾರೆ.

ಗೂಗಲ್‌ ಮ್ಯಾಪ್‌ ಆಧರಿಸಿ ಕಾರು ಚಲಾಯಿಸುತ್ತಿದ್ದಾಗ ಘಟನೆ ನಡೆದಿದೆ ಎಂದು ಚಾಲಕ ತಿಳಿಸಿದ್ದಾರೆ. ಎರಡೂ ಬದಿಯಲ್ಲಿ ಯಾವುದೇ ಆಧಾರ ಇಲ್ಲದ ತೋಡಿನ ಸೇತುವೆ ದಾಟುವಾಗ ಕಾರು ಉರುಳಿದೆ. ಈ ವೇಳೆ ತೋಡು ತುಂಬಿ ಹರಿಯುತ್ತಿತ್ತು.

ಕಾರು ಸಂಪೂರ್ಣವಾಗಿ ಮುಳುಗಿದ್ದರೂ ಕಾರಿನಿಂದ ಹೊರಬಂದ ತಸ್ರೀಫ್‌, ರಶೀದ್‌ ಅವರು ಮರವನ್ನು ಹಿಡಿದು ಕುಳಿತು ಪೊಲೀಸರಿಗೆ ಕರೆ ಮಾಡಿ ಅಪಾಯದಿಂದ ಪಾರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಹರ್ ಘರ್ ತಿರಂಗಾ ಇಂದಿನಿಂದ: ನೀವೂ ಭಾಗಿಯಾಗಿ ಎಂದು ಕರೆ ನೀಡಿದ ವಿಜಯೇಂದ್ರ

ಮುಂದಿನ ಸುದ್ದಿ
Show comments