Webdunia - Bharat's app for daily news and videos

Install App

ಮುಸ್ಲಿಂ ಮಹಿಳೆಗೆ ಡ್ರಾಪ್ ; ಯುವಕನಿಗೆ ಹಲ್ಲೆ ..ಜನರಲ್ಲಿ ಭಯ ಮೂಡಿಸಲು ಕೃತ್ಯ!!

Webdunia
ಬುಧವಾರ, 22 ಸೆಪ್ಟಂಬರ್ 2021 (21:31 IST)
ಮುಸ್ಲಿಂ ಮಹಿಳೆಗೆ ಡ್ರಾಪ್ ನೀಡುತ್ತಿದ್ದ ಕಾರಣಕ್ಕೆ ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ಇಬ್ಬರು ಆರೋಪಿಗಳ ವಿರುದ್ಧ ಕಠಿಣ ಸೆಕ್ಷನ್ ಗಳಡಿ ಕೇಸು ದಾಖಲಿಸಿದ್ದಾರೆ. ಯುವಕ ಮತ್ತು ಮಹಿಳೆಗೆ ನಿಂದಿಸಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. 
ಆರೋಪಿಗಳಾದ ಸೊಹೇಲ್ ಹಾಗೂ ನಯಾಜ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು ಪ್ರಚಾರಕ್ಕಾಗಿ ಈ ಕೃತ್ಯವನ್ನು ಮಾಡಿದ್ದಾಗಿ ಹೇಳಿಕೆ ನೀಡಿದ್ದರು. ಅಲ್ಲದೆ, ಈ ರೀತಿ ಕೆಲಸಗಳಿಂದ ಜನರಲ್ಲಿ ಭಯ ಮೂಡಿಸುವುದು ಮತ್ತು ತಮ್ಮ ಸಂಘಟನೆಯ ಬಗ್ಗೆ ರಾಜ್ಯದಾದ್ಯಂತ ಪ್ರಚುರಪಡಿಸುವುದು ಉದ್ದೇಶ ಇತ್ತು ಎಂದು ಪೊಲೀಸರಲ್ಲಿ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.ಆರೋಪಿಗಳ ವಿರುದ್ಧ ಮಹಿಳೆ ದೂರು ನೀಡಿದ್ದು ಏಳು ವಿವಿಧ ಸೆಕ್ಷನ್ ಗಳಡಿ ಕೇಸ್ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 153(ಎ) ಎರಡು ಧರ್ಮಗಳ ನಡುವೆ ದ್ವೇಷ ಹರಡುವುದು, ಸೆಕ್ಷನ್ 506- ಜೀವ ಬೆದರಿಕೆ, 341- ಅಕ್ರಮ ತಡೆ, 34- ಜನರನ್ನು ಗುರಿಯಾಗಿಸಿ ನೋವುಂಟು ಮಾಡುವುದು, 504 ಮಾನಹಾನಿ, 323- ಮನಸ್ಸಿಗೆ ಘಾಸಿಗೊಳಿಸುವುದು ಹಾಗೂ 354ರಡಿ ಮಹಿಳೆ ಮೇಲೆ ದೌರ್ಜನ್ಯ ಆರೋಪದಲ್ಲಿ ಎಫ್‌ಐಆರ್ ದಾಖಲಾಗಿದೆ. 
ಬುರ್ಖಾಧಾರಿ ಮಹಿಳೆಗೆ ಬೈಕಿನಲ್ಲಿ ಡ್ರಾಪ್‌ ಕೊಡುತ್ತಿದ್ದ ವೇಳೆ ಹಲ್ಲೆ ನಡೆಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಅದರಲ್ಲಿ ಮಹಿಳೆಯನ್ನು ನಿಂದಿಸಿದ್ದಲ್ಲದೆ, ಆಕೆಯ ಗಂಡನ ಫೋನ್ ನಂಬರ್ ಪಡೆದು ದಬಾಯಿಸುವ ಚಿತ್ರಣ ದಾಖಲಾಗಿತ್ತು. ಹಿಂದು ಯುವಕನ ಜೊತೆಗೆ ತೆರಳುತ್ತಿದ್ದುದನ್ನು ಆಕ್ಷೇಪಿಸಿದ್ದಕ್ಕೆ, ಮನೆ ಹತ್ತಿರ ಇದ್ದಾರೆ, ಅದೇ ದಾರಿಯಲ್ಲಿ ಹೋಗುವುದರಿಂದ ತೆರಳುತ್ತಿದ್ದೇನೆ ಎಂದು ಮಹಿಳೆ ಹೇಳಿದ್ದರು. ಆನಂತರ ಆಕೆಯನ್ನು ಬೈಕಿನಿಂದ ಇಳಿಸಿ, ಆಟೋದಲ್ಲಿ ಕಳಿಸಿಕೊಡಲಾಗಿತ್ತು. 
ಪ್ರಕರಣವನ್ನು ಗಂಭೀರ ಪರಿಗಣಿಸಿದ್ದ ಬೆಂಗಳೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಈ ಬಗ್ಗೆ ಸಿಎಂ ಬಸವರಾಜ್‌ ಬೊಮ್ಮಾಯಿ ಕೂಡ ಟ್ವೀಟ್‌ ಮಾಡಿದ್ದು, ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments